ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ 
ದೇಶ

ಮಹುವಾ ಮೊಯಿತ್ರಾ ಉಚ್ಚಾಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಮಾರ್ಚ್‌ನಲ್ಲಿ ಮುಂದಿನ ವಿಚಾರಣೆ

ಕಳೆದ ತಿಂಗಳು ಸಂಸದ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಕಳೆದ ತಿಂಗಳು ಸಂಸದ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ನೋಟಿಸ್ ಗೆ ಮೂರು ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಆದಾಗ್ಯೂ, ಲೋಕಸಭೆಯ ಕಲಾಪದಲ್ಲಿ ಭಾಗವಹಿಸಲು ಟಿಎಂಸಿ ನಾಯಕಿಗೆ ಅವಕಾಶ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಇದಕ್ಕೆ ಅನುಮತಿಸುವುದು ಮುಖ್ಯ ಅರ್ಜಿಯನ್ನು ಅನುಮತಿಸಿದಂತಾಗುತ್ತದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ, ಮಾರ್ಚ್ 11 ರಿಂದ ಲೋಕಸಭೆಯಿಂದ ಉಚ್ಚಾಟನೆ ವಿರುದ್ಧ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿದೆ.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಸಭೆ ನೈತಿಕತೆಯ ಸಮಿತಿಗೆ ಯಾವುದೇ ನೋಟಿಸ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಬ್ಬರನ್ನೂ ಮೊಯಿತ್ರಾ ಅವರು ತಮ್ಮ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

ಏತನ್ಮಧ್ಯೆ, ಲೋಕಸಭೆ ಸೆಕ್ರೆಟರಿ ಜನರಲ್ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅಧಿಕೃತವಾಗಿ ನೋಟಿಸ್ ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಮತ್ತು ಮೊಯಿತ್ರಾ ಅವರ ಅರ್ಜಿಗೆ ಉತ್ತರ ಸಲ್ಲಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?