ಸಾಂದರ್ಭಿಕ ಚಿತ್ರ 
ದೇಶ

ನ್ಯಾಯಾಲಯದಲ್ಲಿ ಸರ್ಕಾರಿ ಅಧಿಕಾರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪ್ರಕಟ

ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್‌ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.

ನವದೆಹಲಿ: ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್‌ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಖುದ್ದು ಹಾಜರಾತಿಗೆ ನ್ಯಾಯಾಲಯಗಳು ಸೂಚಿಸಬೇಕು ಆದರೆ, ಮೊದಲ ಆಯ್ಕೆಯಾಗಿ 24 ಗಂಟೆಗಳ ಮೊದಲು ಅಧಿಕಾರಿಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಲಿಂಕ್ ನೀಡಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಹೇಳಿತು.

"ಅಫಿಡವಿಟ್‌ನಲ್ಲಿನ ಅಧಿಕಾರಿಯ ನಿಲುವು ನ್ಯಾಯಾಲಯದ ದೃಷ್ಟಿಕೋನದಿಂದ ಭಿನ್ನವಾಗಿದೆ ಎಂಬ ಕಾರಣಕ್ಕಾಗಿ ನ್ಯಾಯಾಲಯವು ಅಧಿಕಾರಿಯ ಉಪಸ್ಥಿತಿಯನ್ನು ನಿರ್ದೇಶಿಸಬಾರದು. ಅಂತಹ ಸಂದರ್ಭಗಳಲ್ಲಿ ಅಸ್ತಿತ್ವದಲ್ಲಿರುವ ದಾಖಲೆಗಳ ಆಧಾರದ ಮೇಲೆ ವಿಷಯವನ್ನು ಪರಿಹರಿಸಬಹುದಾದರೆ, ಅದಕ್ಕನುಗುಣವಾಗಿ ಅರ್ಹತೆಯ ಮೇಲೆ ಅದನ್ನು ನಿರ್ಧರಿಸಬೇಕು ಪೀಠ ಹೇಳಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಇಬ್ಬರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಕರೆಸುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಮಾರ್ಗಸೂಚಿಗಳನ್ನು ನೀಡಿದೆ.

ಎಲ್ಲಾ ರಾಜ್ಯ ಹೈಕೋರ್ಟ್‌ಗಳು ತನ್ನ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡ ನಂತರ ಸರ್ಕಾರಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಲು ನಿಯಮಗಳನ್ನು ರೂಪಿಸುವುದನ್ನು ಪರಿಗಣಿಸಬೇಕು ಎಂದು ಪೀಠ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT