ಶ್ರಮಜೀವಿ ರೈಲು 
ದೇಶ

ಉತ್ತರ ಪ್ರದೇಶ: 2005ರ ಶ್ರಮಜೀವಿ ರೈಲು ಸ್ಫೋಟ ಪ್ರಕರಣದಲ್ಲಿ ಇಬ್ಬರಿಗೆ ಗಲ್ಲು ಶಿಕ್ಷೆ

2005ರ ಶ್ರಮಜೀವಿ ಎಕ್ಸ್‌ಪ್ರೆಸ್‌ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಬ್ಬರಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಐ) ರಾಜೇಶ್‌ ರೈ ಅವರು ಗಲ್ಲು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಜೌನ್‌ಪುರ: 2005ರ ಶ್ರಮಜೀವಿ ಎಕ್ಸ್‌ಪ್ರೆಸ್‌ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಬ್ಬರಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಐ) ರಾಜೇಶ್‌ ರೈ ಅವರು ಗಲ್ಲು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಜುಲೈ 28, 2005 ರಂದು ಉತ್ತರ ಪ್ರದೇಶದ ಜೌನ್‌ಪುರ ರೈಲು ನಿಲ್ದಾಣದ ಬಳಿ ಶ್ರಮಜೀವಿ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ಸ್ಫೋಟ ಸಂಭವಿಸಿ 14 ಜನರು ಸಾವನ್ನಪ್ಪಿದರು ಮತ್ತು 61 ಜನ ಗಾಯಗೊಂಡಿದ್ದರು.

ಸ್ಫೋಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ(ಐ) ರಾಜೇಶ್‌ ರೈ ಅವರು, ಕಳೆದ ಡಿಸೆಂಬರ್ 22 ರಂದು ಹರ್ಕತ್-ಉಲ್-ಜಿಹಾದ್-ಅಲ್-ಇಸ್ಲಾಮಿಯ ಸಂಘಟನೆಯ ಇಬ್ಬರು ಕಾರ್ಯಕರ್ತರಾದ ಹಿಲಾಲುದ್ದೀನ್ ಮತ್ತು ನಫಿಕುಲ್ ಬಿಸ್ವಾಸ್ ತಪ್ಪಿತಸ್ಥರೆಂದು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದ್ದಾರೆ.

ಬಾಂಗ್ಲಾದೇಶ ನಿವಾಸಿ ಹಿಲಾಲುದ್ದೀನ್ ವಿರುದ್ಧ ರೈಲಿನಲ್ಲಿ ಬಾಂಬ್ ಇಟ್ಟ ಆರೋಪ ಹೊರಿಸಿದ್ದರೆ, ಪಶ್ಚಿಮ ಬಂಗಾಳದ ನಿವಾಸಿ ನಫಿಕುಲ್ ಬಿಸ್ವಾಸ್ ವಿರುದ್ಧ ಸಹಾಯ ಮಾಡಿದ ಆರೋಪವಿದೆ. ಸದ್ಯ ಈ ಇಬ್ಬರು ಅಪರಾಧಿಗಳು ಮತ್ತೊಂದು ಪ್ರಕರಣದಲ್ಲಿ ಹೈದರಾಬಾದ್ ಜೈಲಿನಲ್ಲಿದ್ದಾರೆ.

ಶ್ರಮಜೀವಿ ರೈಲು ಸ್ಫೋಟ ಪ್ರಕರಣದಲ್ಲಿ ಇತರ ಇಬ್ಬರಿ ಅಪರಾಧಿಗಳಿಗೆ 2016ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT