ಪಂಜಾಬ್ ಪೊಲೀಸ್ ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್ ಡಿಎಸ್ಪಿ ಹತ್ಯೆ ಪ್ರಕರಣ: ಆಟೋರಿಕ್ಷಾ ಚಾಲಕನ ಬಂಧನ

ಪಂಜಾಬ್ ಸಶಸ್ತ್ರ ಪೊಲೀಸ್  ಪಡೆಯ (ಪಿಎಪಿ) ಡೆಪ್ಯುಟಿ ಸೂಪರಿಂಟೆಂಡೆಂಟ್ ಶವವಾಗಿ ಪತ್ತೆಯಾದ ನಾಲ್ಕು ದಿನಗಳ ನಂತರ, ಆಟೋರಿಕ್ಷಾ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಜಲಂಧರ್‌: ಪಂಜಾಬ್ ಸಶಸ್ತ್ರ ಪೊಲೀಸ್  ಪಡೆಯ (ಪಿಎಪಿ) ಡೆಪ್ಯುಟಿ ಸೂಪರಿಂಟೆಂಡೆಂಟ್ ಶವವಾಗಿ ಪತ್ತೆಯಾದ ನಾಲ್ಕು ದಿನಗಳ ನಂತರ, ಆಟೋರಿಕ್ಷಾ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.  ಆರೋಪಿ ಜಗಳದ ನಂತರ ಅರ್ಜುನ ಪ್ರಶಸ್ತಿ ಪುರಸ್ಕೃತ ಮತ್ತು ವೇಟ್‌ಲಿಫ್ಟರ್ ಆಗಿದ್ದ ದಲ್ಬೀರ್ ಸಿಂಗ್ (54) ಅವರನ್ನು ಅಧಿಕಾರಿಯ ಸರ್ವೀಸ್ ಪಿಸ್ತೂಲ್‌ನಿಂದ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಸಿಂಗ್ ಅವರ ದೇಹದ ಮೇಲೆ ಗಾಯದ ಗುರುತುಗಳಾಗಿ ಜಲಂಧರ್‌ನ ಬಸ್ತಿ ಬಾವಾ ಖೇಲ್‌ನಲ್ಲಿ ಸೋಮವಾರ ರಸ್ತೆಯ ಮೇಲೆ ಬಿದ್ದಿರುವುದು ಕಂಡುಬಂದಿತ್ತು. ಡಿಸೆಂಬರ್ 31 ರ ರಾತ್ರಿ ಹೊಸ ವರ್ಷದ ಮುನ್ನಾದಿನದಂದು ಡಿಎಸ್ಪಿ ಅವರನ್ನು ಆಟೋ ಚಾಲಕ ವಿಜಯ್ ಕುಮಾರ್ ಕಪುರ್ತಲಾದ ಅವರ ಗ್ರಾಮ ಖೋಜೆವಾಲ್‌ಗೆ ಡ್ರಾಪ್ ಮಾಡುವಂತೆ ಹೇಳಿದ ನಂತರ ಈ ಘಟನೆ ನಡೆದಿದೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಸ್ವಪನ್ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಮಾದಕ ವ್ಯಸನಿ ಎಂದು ಆರೋಪಿಸಲಾದ ಆಟೋ ಚಾಲ ಕುಮಾರ್, ಅಷ್ಟು ದೂರ ಹೋಗಲು ನಿರಾಕರಿಸಿ ಜಗಳವಾಡಿದ್ದಾನೆ, ವಾಗ್ವಾದ ಹೆಚ್ಚಾದಾಗ ಆರೋಪಿ  ಡಿಎಸ್‌ಪಿಯವರ ಸರ್ವೀಸ್ ಪಿಸ್ತೂಲ್ ಹಿಡಿದು ಅಧಿಕಾರಿಯ ಮೇಲೆ ಗುಂಡು ಹಾರಿಸಿರುವುದಾಗಿ ಅವರು ಮಾಹಿತಿ ನೀಡಿದರು. 

ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯು ಗುಂಡಿನ ಗಾಯವನ್ನು ಬಹಿರಂಗಪಡಿಸಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT