ಸಾಂದರ್ಭಿಕ ಚಿತ್ರ 
ದೇಶ

ಇಂಡೋ-ಕೆನಡಿಯನ್ನರಿಗೆ ಸುಲಿಗೆ ಕರೆ: ಕೇಂದ್ರ ಸರ್ಕಾರ ತೀವ್ರ ಕಳವಳ

ಕೆನಡಾದಲ್ಲಿರುವ ಭಾರತೀಯ ಸಮುದಾಯದ ಕೆಲವರಿಗೆ 'ಸುಲಿಗೆ ಕರೆಗಳು ಬಂದಿವೆ ಎಂಬ' ವರದಿಗಳ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಜನರು ವಿಶೇಷವಾಗಿ ಭಾರತೀಯ ಪ್ರಜೆಗಳು ಸುಲಿಗೆ ಕರೆ ಸ್ವೀಕರಿಸುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನವದೆಹಲಿ: ಕೆನಡಾದಲ್ಲಿರುವ ಭಾರತೀಯ ಸಮುದಾಯದ ಕೆಲವರಿಗೆ 'ಸುಲಿಗೆ ಕರೆಗಳು ಬಂದಿವೆ ಎಂಬ' ವರದಿಗಳ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಜನರು ವಿಶೇಷವಾಗಿ ಭಾರತೀಯ ಪ್ರಜೆಗಳು ಸುಲಿಗೆ ಕರೆ ಸ್ವೀಕರಿಸುತ್ತಿರುವುದು ಗಂಭೀರ ಹಾಗೂ  ಕಳವಳಕಾರಿ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಭಾರತ ಮತ್ತು ಕೆನಡಾ ಚರ್ಚಿಸಲು ಹಲವಾರು ವಿಷಯಗಳಿವೆ. ದೇವಾಲಯದ ಮೇಲೆ ದಾಳಿ ನಡೆದಿರುವ ವಿಚಾರವಿತ್ತು. ದೇವಾಲಯದ ಆವರಣದಲ್ಲಿ ತನಿಖೆ ನಡೆಸಿದ ಕೆನಡಾ ಪೊಲೀಸರು, ಮಾನಸಿಕ ಅಸ್ವಸ್ಥ ವ್ಯಕ್ತಿ ದೇವಾಲಯದ ಒಳಗೆ ನುಗ್ಗಿರುವುದಾಗಿ ಹೇಳಿದ್ದಾರೆ. ಹಾಗಾಗಿ ಇಂತಹ ಸಮಸ್ಯೆಗಳು ನಡೆಯುತ್ತಲೇ ಇರುತ್ತವೆ ಎಂದರು. 

ವಕ್ತಾರರಾಗಿ ಜೈಸ್ವಾಲ್ ಅವರದು ಇದು ಮೊದಲ ಸುದ್ದಿಗೋಷ್ಠಿಯಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ವಾಸಿಸುತ್ತಿರುವ ಇಂಡೋ-ಕೆನಡಿಯನ್ ಜನರಿಗೆ ಸುಲಿಗೆ ಮತ್ತು ಬೆದರಿಕೆ ಕರೆಗಳು ಬರುತ್ತಿರುವುದು ತೀವ್ರ ಕಳವಕಾರಿಯಾಗಿವೆ ಎಂದು ಅವರು ಹೇಳಿದರು.

ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರ ಕೆಲವು ವ್ಯವಹಾರಗಳನ್ನು ಗುರಿಯಾಗಿಸಿಕೊಂಡು ಬರುತ್ತಿರುವ ಸುಲಿಗೆಯ ವರದಿಗಳನ್ನು ತನಿಖೆ ಮಾಡಲು ಕೆನಡಾದಲ್ಲಿ ಕಾನೂನು ಜಾರಿ ಕಾರ್ಯಪಡೆಯನ್ನು ಸ್ಥಾಪಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಒಂಬತ್ತು ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕೆನಡಾದ ಪೊಲೀಸರನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಇತ್ತೀಚಿಗೆ ಕ್ಷೀಣಿಸದ್ದು, ಕೆನಡಾದಲ್ಲಿ  ಉಗ್ರರು ಮತ್ತು ಭಾರತ ವಿರೋಧಿಗಳಿಗೆ ನೆಲೆ ನೀಡಿರುವುದು ಪ್ರಮುಖ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಈ ಹಿಂದೆ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT