ಅರವಿಂದ್ ಕೇಜ್ರಿವಾಲ್ 
ದೇಶ

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾವುದೇ ರೀತಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ. ಬಿಜೆಪಿ ನನ್ನನ್ನು ಬಂಧಿಸಲು ಬಯಸಿದೆ. ನನ್ನ ದೊಡ್ಡ ಆಸ್ತಿ ನನ್ನ ಪ್ರಾಮಾಣಿಕತೆ, ಅವರು ನಾಶಮಾಡಲು ನೋಡುತ್ತಿದ್ದಾರೆ. ನನಗೆ ಸಮನ್ಸ್ ಕಳುಹಿಸಿರುವುದು ಕಾನೂನುಬಾಹಿರ ಎಂದು ನನ್ನ ವಕೀಲರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಉದ್ದೇಶ ನನ್ನ ತನಿಖೆಯಲ್ಲ. ಮುಂಬರುವ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ನನಗೆ ಅವಕಾಶ ಸಿಗದಂತೆ ಮಾಡುವುದು ಅವರ ಉದ್ದೇಶವಾಗಿದೆ. ತನಿಖೆಯ ನೆಪದಲ್ಲಿ ನನ್ನನ್ನು ಕರೆದು ನಂತರ ಬಂಧಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದರು.

ಅರವಿಂದ್ ಕೇಜ್ರಿವಾಲ್ ತನಿಖೆಗೆ ಸಹಕರಿಸುತ್ತಾರೆ: ದೆಹಲಿ ಮದ್ಯದ ಹಗರಣವು ನಕಲಿ ಎಂದು ಆಪ್ ನಾಯಕರು ಆರೋಪಿಸಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ "ಕಾನೂನು" ಸಮನ್ಸ್ ಕಳುಹಿಸಿದರೆ ಅವರು ಜಾರಿ ನಿರ್ದೇಶನಾಲಯ ತನಿಖೆಗೆ ಸಹಕರಿಸುತ್ತಾರೆ ಎಂದಿದ್ದಾರೆ. 

ಕೇಜ್ರಿವಾಲ್ ಅವರು ನಿನ್ನೆ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ನಿರಾಕರಿಸಿದರು, ಸಮನ್ಸ್ "ಅಕ್ರಮ" ಮತ್ತು "ರಾಜಕೀಯ ಪ್ರೇರಿತ" ಎಂದು ಟೀಕಿಸಿದ್ದರು.

ಈ ಬಗ್ಗೆ ಇಂದು ಮಾತನಾಡಿರುವ ಎಎಪಿ ನಾಯಕ ಜಾಸ್ಮಿನ್ ಶಾ, ಕಳೆದ ಎರಡು ವರ್ಷಗಳಿಂದ ಆಪಾದಿತ ಮದ್ಯ ಹಗರಣದ ತನಿಖೆ ನಡೆಯುತ್ತಿದೆ ಆದರೆ ಇದುವರೆಗೆ ಜಾರಿ ನಿರ್ದೇಶನಾಲಯ ಯಾವುದೇ ಸಾಕ್ಷಿ ಮುಂದಿಟ್ಟಿಲ್ಲ. ಮದ್ಯ ಹಗರಣ ಎಂದು ಕರೆಯಲ್ಪಡುವ ತನಿಖೆ ನಕಲಿಯಾಗಿದೆ. ಕಳೆದ ಎರಡು ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.ಇಡಿ 500 ಕ್ಕೂ ಹೆಚ್ಚು ಸಾಕ್ಷಿಗಳನ್ನು ಕರೆದು 1,000 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ ಆದರೆ ಇದುವರೆಗೆ ಸಾಕ್ಷಿಯಾಗಿ ಒಂದು ರೂಪಾಯಿಯನ್ನೂ ವಶಪಡಿಸಿಕೊಂಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ