ಜಿತೇಂದ್ರ ಅವ್ಹಾದ್ 
ದೇಶ

ಭಗವಾನ್ ಶ್ರೀರಾಮ ಮಾಂಸಾಹಾರಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಎನ್ ಸಿಪಿ ನಾಯಕ ಜಿತೇಂದ್ರ ಅವ್ಹಾದ್

ಭಗವಾನ್ ರಾಮ ಮಾಂಸಾಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಲ್ಲದೆ ಕ್ಷಮೆಯಾಚಿಸಿದ್ದಾರೆ.

ಮುಂಬೈ: ಭಗವಾನ್ ರಾಮ ಮಾಂಸಾಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಲ್ಲದೆ ಕ್ಷಮೆಯಾಚಿಸಿದ್ದಾರೆ.

ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶದಿಂದ ನಾನು ಆ ಹೇಳಿಕೆ ನೀಡಿರಲಿಲ್ಲ. ನನ್ನ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ ಎಂದು ಅವ್ಹಾದ್ ಹೇಳಿದ್ದಾರೆ ಎಂದು ಸುದ್ದಿ ಎಎನ್‌ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ.

ರಾಮ ಮಾಂಸಾಹಾರಿ ಎಂಬ ಕಲ್ಪನೆಯನ್ನು ನಾನು ನನ್ನ ಮನೆಯಿಂದ ತಂದಿಲ್ಲ. ಇದನ್ನು ವಾಲ್ಮೀಕಿ ರಾಮಾಯಣದಲ್ಲಿ ಬರೆಯಲಾಗಿದೆ. ಕೋಲ್ಕತ್ತಾ ಮತ್ತು ಐಐಟಿ ಕಾನ್ಪುರದಲ್ಲಿ ಮುದ್ರಿಸಲಾದ 1891 ರ ಅಧಿಕೃತ ಆವೃತ್ತಿಯು ಸಾಕಷ್ಟು ಕೆಲಸ ಮಾಡಿದೆ, ಅದರಲ್ಲಿ ಇದನ್ನು ಪ್ರಸ್ತಾಪಿಸಲಾಗಿದೆ. ನಾನು ಎಲ್ಲವನ್ನೂ ಸಾರ್ವಜನಿಕರ ಮುಂದೆ ಇಡುತ್ತೇನೆ. ಇದು ನಾನು ಹೇಳಿದ್ದಲ್ಲ, 1891 ರಲ್ಲಿ ಬರೆದದ್ದು ನಾನಲ್ಲ ಎಂದು ಹೇಳಿದರು. 

ತಮ್ಮ ಹೇಳಿಕೆ ತೀವ್ರ ವಿವಾದ ಎದ್ದ ನಂತರ ಅವಾದ್ ಕ್ಷಮೆಯಾಚಿಸಿದ್ದಾರೆ. ಮಹಾರಾಷ್ಟ್ರದ ಶಿರಡಿಯಲ್ಲಿ ನಿನ್ನೆ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವ್ಹಾದ್, ಭಗವಾನ್ ರಾಮನು ಸಸ್ಯಾಹಾರಿ ಅಲ್ಲ, ಅವರು 14 ವರ್ಷಗಳ ಕಾಲ ಕಾಡಿನಲ್ಲಿ ಹೇಗೆ ಬದುಕುತ್ತಿದ್ದರು, ಬೇಟೆಯಾಡಿ ಮಾಂಸ ತಿಂದು ಬದುಕುತ್ತಿದ್ದರು ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ