ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ದಾಳಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮೇಲೆ ಹಲ್ಲೆ: ಟಿಎಂಸಿ ಬೆಂಬಲಿಗರಿಂದ ಕೃತ್ಯ

ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲು ಹೋದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆದಿದೆ. ಟಿಎಂಸಿಯ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲು ಹೋದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆದಿದೆ. ಟಿಎಂಸಿಯ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
 
ಟಿಎಂಸಿ ನಾಯಕ ಶೇಖ್ ಸಾಜಹಾನ್ ಬೆಂಬಲಿಗರು ಈ ದಾಳಿ ನಡೆಸಿದ್ದು, ಅಧಿಕಾರಿಗಳು ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ಪಡಿತರ ವಿತರಣೆ ಹಗರಣದ ಸಂಬಂಧದ ತನಿಖೆಯ ಭಾಗವಾಗಿ ಶೇಖ್ ಸಾಜಹಾನ್ ನಿವಾಸದ ಮೇಲೆ ದಾಳಿ ನಡೆಸಲು ಯತ್ನಿಸಿದಾಗ ಈ ಘಟನೆ ನಡೆದಿದೆ.
 
ಪಶ್ಚಿಮ ಬಂಗಾಳದ 15 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ಈ ಪೈಕಿ ಶೇಖ್ ಸಾಜಹಾನ್ ನಿವಾಸವೂ ಒಂದಾಗಿದೆ. 

ಶೇಖ್ ನಿವಾಸಕ್ಕೆ ಬಂದ ಅಧಿಕಾರಿಗಳನ್ನು ಟಿಎಂಸಿ ನಾಯಕನ ಬೆಂಬಲಿಗರು ಘೇರಾವ್ ಮಾಡಿ ಆ ಪ್ರದೇಶವನ್ನು ತೊರೆಯುವಂತೆ ಒತ್ತಾಯಿಸಿದರು ಎಂದು ಹಲ್ಲೆಗೊಳಗಾದ ಅಧಿಕಾರಿ ಹೇಳಿದ್ದಾರೆ. ಈ ಪೈಕಿ ಓರ್ವ ಅಧಿಕಾರಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದೆ.

ಸಜಹಾನ್ ಬಹುಕೋಟಿ ಪಡಿತರ ವಿತರಣೆ ಹಗರಣದ ಸಂಬಂಧ ಬಂಧಿತರಾಗಿರುವ ರಾಜ್ಯ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ಆಪ್ತ ಸಹಾಯಕ ಎಂದು ಪರಿಗಣಿಸಲಾಗಿದೆ. ಹಿಂದೆಂದೂ ಈ ರೀತಿಯ ದಾಳಿ ನಡೆದಿರುವ ಉದಾಹರಣೆಗಳಿಲ್ಲ. ಶೇಖ್ ಷಹಜಹಾನ್ ಕುರಿತು ನಮ್ಮ ದೆಹಲಿ ಕಚೇರಿಗೆ ವರದಿ ಕಳುಹಿಸಿದ್ದೇವೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 

ಇಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಉತ್ತರ 24 ಪರಗಣ ಜಿಲ್ಲೆಯ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಲಿಲ್ಲ ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

ಆಜ್ ತಕ್ ನಿರೂಪಕನ ವಿರುದ್ಧ ದ್ವೇಷ ಭಾಷಣ ಆರೋಪ: ಎಫ್‌ಐಆರ್ ದಾಖಲಿಸಲು UP ನ್ಯಾಯಾಲಯ ಆದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

SCROLL FOR NEXT