ತಿರುಪತಿ ಲಾಡು ಮತ್ತು ಅಯೋಧ್ಯೆ ರಾಮಮಂದಿರ 
ದೇಶ

ಅಯೋಧ್ಯೆ ಶ್ರೀರಾಮಮಂದಿರಕ್ಕೆ ತಿರುಮಲ ದೇಗುಲದಿಂದ 1 ಲಕ್ಷ ಲಾಡು ಪೂರೈಕೆ

ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಜಗತ್ ವಿಖ್ಯಾತ ಪವಿತ್ರ ಯಾತ್ರಾ ತಾಣ ತಿರುಪತಿ ತಿರುಮಲ ದೇಗುಲದಿಂದ ಸುಮಾರು 1 ಲಕ್ಷ ಲಾಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಅಯೋಧ್ಯೆ: ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಜಗತ್ ವಿಖ್ಯಾತ ಪವಿತ್ರ ಯಾತ್ರಾ ತಾಣ ತಿರುಪತಿ ತಿರುಮಲ ದೇಗುಲದಿಂದ ಸುಮಾರು 1 ಲಕ್ಷ ಲಾಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಹೌದು.. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಅಧಿಕೃತ ಪಾಲಕರಾದ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ ಒಂದು ಲಕ್ಷ ಲಡ್ಡುಗಳನ್ನು ಪೂರೈಸಲಿದೆ ಎಂದು ಶುಕ್ರವಾರ ಇಲ್ಲಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಯೋಧ್ಯೆಗೆ ಪೂರೈಕೆಯಾಗಲಿರುವ ಲಾಡು ತಲಾ 25 ಗ್ರಾಂ ತೂಕವಿರಲಿದ್ದು, ಕಾರ್ಯಕ್ರಮಕ್ಕೆ ಆಗಮಿಸಲಿರುವ ಭಕ್ತರಿಗೆ ವಿತರಿಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರವಾಸಿಗರಿಗೆ ವಿತರಿಸಲು ತಲಾ 25 ಗ್ರಾಂ ತೂಕದ ಒಂದು ಲಕ್ಷ ಲಡ್ಡುಗಳನ್ನು ನೀಡಲು ಟಿಟಿಡಿ ಒಪ್ಪಿಗೆ ನೀಡಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ ವಿ ಧರ್ಮಾ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯನಿರ್ವಾಹಕ ಅಧಿಕಾರಿ ಭಕ್ತರೊಂದಿಗೆ 'ಡಯಲ್ ಯುವರ್ ಇಒ' ಸಂವಾದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಇದೇ ವೇಳೆ ದೇವಾಲಯಕ್ಕೆ ಭೇಟಿ ನೀಡುವಾಗ ಅರ್ಜಿತ ಸೇವೆಗಳು, ದೇಣಿಗೆಗಳು, ದರ್ಶನ ಮತ್ತು ಕೊಠಡಿಗಳನ್ನು ಕಾಯ್ದಿರಿಸಲು ttdevasthanams.ap.gov.in ಅನ್ನು ಮಾತ್ರ ಬಳಸಬೇಕೆಂದು ಅವರು ಭಕ್ತರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT