ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಚಳಿ ಕಾಯಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಲ್ಲಿಯೇ ಬೆಂಕಿ ಹೊತ್ತಿಸಿದ ಇಬ್ಬರ ಬಂಧನ!

ನವದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಚಲಿಸುತ್ತಿದ್ದ ವೇಳೆಯೇ ಚಳಿ ಕಾಯಿಸಿಕೊಳ್ಳಲು ಬೆಂಕಿ ಹೊತ್ತಿಸಿದ ಇಬ್ಬರ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ದೊಡ್ಡ...

ಅಲಿಘರ್: ನವದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಚಲಿಸುತ್ತಿದ್ದ ವೇಳೆಯೇ ಚಳಿ ಕಾಯಿಸಿಕೊಳ್ಳಲು ಬೆಂಕಿ ಹೊತ್ತಿಸಿದ ಇಬ್ಬರ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ರೈಲಿನಿಂದ ಹೊಗೆ ಹೊರಹೊಮ್ಮುತ್ತಿದ್ದ ಬಗ್ಗೆ ಗೇಟ್‌ಮ್ಯಾನ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಹೊತ್ತಿಸಿದ ಇಬ್ಬರನ್ನು ಬಂಧಿಸಲಾಗಿದೆ.

ಅಲಿಘರ್‌ ರೈಲ್ವೆ ಸಂರಕ್ಷಣಾ ಪಡೆ(ಆರ್‌ಪಿಎಫ್) ಅಧಿಕಾರಿಯ ಪ್ರಕಾರ, ಜನವರಿ 3 ರಂದು ರಾತ್ರಿ ಬರ್ಹಾನ್ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಕರ್ತವ್ಯದಲ್ಲಿದ್ದ ಗೇಟ್‌ಮ್ಯಾನ್ ರೈಲಿನ ಕೋಚ್‌ನಿಂದ ಬೆಳಕು ಮತ್ತು ಹೊಗೆ ಬರುತ್ತಿರುವುದನ್ನು ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಬರ್ಹಾನ್ ರೈಲ್ವೆ ನಿಲ್ದಾಣದ ತಮ್ಮ ಮೇಲಧಿಕಾರಿಗಳಿಗೆ ಗೇಟ್ ಮ್ಯಾನ್ ಮಾಹಿತಿ ನೀಡಿದ್ದಾರೆ. ನಂತರ ಆರ್‌ಪಿಎಫ್ ತಂಡ ರೈಲನ್ನು ಮುಂದಿನ ನಿಲ್ದಾಣ ಚಾಮ್ರೌಲಾದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿದ್ದಾರೆ.

ತೀವ್ರವಾದ ಚಳಿ ಇತ್ತು. ಹೀಗಾಗಿ ಸಗಣಿ ಬೆರಣಿ ಬಳಸಿ ಜನರಲ್ ಕೋಚ್ ನಲ್ಲಿ ಬೆಂಕಿ ಹೊತ್ತಿಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ. ತಕ್ಷಣವೇ ಬೆಂಕಿಯನ್ನು ನಂದಿಸಲಾಯಿತು ಮತ್ತು ನಂತರ ರೈಲು ಅಲಿಘರ್ ಜಂಕ್ಷನ್‌ಗೆ ತೆರಳಿತು. ಅಲ್ಲಿ 16 ಜನರನ್ನು ವಶಕ್ಕೆ ಪಡೆಯಲಾಗಿದೆ.

ಫರಿದಾಬಾದ್‌ ಚಂದನ್(23) ಮತ್ತು ದೇವೇಂದ್ರ (25) ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದ್ದು, ಇಬ್ಬರು ಯುವಕರು ಚಳಿ ಕಾಯಿಸಿಕೊಳ್ಳಲು ಬೆಂಕಿ ಹೊತ್ತಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಲಿಘರ್ ರೈಲ್ವೆ ನಿಲ್ದಾಣದ ಆರ್‌ಪಿಎಫ್ ಕಮಾಂಡೆಂಟ್ ರಾಜೀವ್ ವರ್ಮಾ ಅನಪಿ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT