ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ

ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೊಚ್ಚಿ: ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರಾದ ದೀಪಕ್ ಕುಮಾರ್ ಸಾಹು ಮತ್ತು ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಇಬ್ಬರು ಶಿಕ್ಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುತ್ತದೆ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಖ್ಯಾತ ಗಾಯಕಿ ನಿಕಿತಾ ಗಾಂಧಿ  ಕುಸಾಟ್‌ನ ಬಯಲು ಸಭಾಂಗಣದಲ್ಲಿ ಸಂಗೀತ ಉತ್ಸವದಲ್ಲಿ ಭಾಗವಹಿಸುವ ಮೊದಲು ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದರು.

ತನಿಖೆಯ ನಂತರ ಮಾಜಿ ಪ್ರಾಂಶುಪಾಲರು ಮತ್ತು ಕೆಲವು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಲೋಪದೋಷಗಳನ್ನು ಉಲ್ಲೇಖಿಸಿ ವಿವರವಾದ ವರದಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ  ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!