ನರೇಶ್ ಘೋಯಲ್ 
ದೇಶ

‘ಜೀವನದ ಭರವಸೆಯನ್ನೇ ಕಳೆದುಕೊಂಡಿದ್ದೇನೆ, ಈ ಸ್ಥಿತಿಯಲ್ಲಿ ಬದುಕಿರುವುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ’

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ (ಜೆಐಎಲ್) ಸಂಸ್ಥಾಪಕ 74 ವರ್ಷದ ನರೇಶ್ ಗೋಯಲ್ ಅವರು ಜೀವನದ ಪ್ರತಿಯೊಂದು ಭರವಸೆಯನ್ನು ಕಳೆದುಕೊಂಡ ಕೋರ್ಟ್ ಸಮ್ಮುಖದಲ್ಲೇ ಕಣ್ಣೀರು ಹಾಕಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ (ಜೆಐಎಲ್) ಸಂಸ್ಥಾಪಕ 74 ವರ್ಷದ ನರೇಶ್ ಗೋಯಲ್ ಅವರು ಜೀವನದ ಪ್ರತಿಯೊಂದು ಭರವಸೆಯನ್ನು ಕಳೆದುಕೊಂಡ ಕೋರ್ಟ್ ಸಮ್ಮುಖದಲ್ಲೇ ಕಣ್ಣೀರು ಹಾಕಿದ್ದಾರೆ.

‘ಜೀವನದ ಕುರಿತು ಭರವಸೆಯನ್ನೇ ಕಳೆದುಕೊಂಡಿದ್ದೇನೆ. ನಾನು ಈ ಸ್ಥಿತಿಯಲ್ಲಿ ಬದುಕಿರುವುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ’. ಹೀಗೆಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರು ವಿಶೇಷ ನ್ಯಾಯಾಲಯವೊಂದರಲ್ಲಿ ಹೇಳಿದರು. ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚಿಸಿದ ಆರೋಪ ಮೇಲೆ ಅವರನ್ನು ಕಳೆದ ವರ್ಷ ಸೆಪ್ಟೆಂಬರ್‌ 1ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು.

ಗೋಯಲ್‌ ಅವರು ಸದ್ಯ ಮುಂಬೈನ ಆರ್ಥರ್‌ ಜೈಲಿನಲ್ಲಿ ನ್ಯಾಯಾಂಗ ವಶದಲ್ಲಿರುವ ಅವರು, ಕಳೆದ ತಿಂಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗಾಗಿ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ಶನಿವಾರ ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶರ ಎದುರು ಕೈಕಟ್ಟಿ ದುಃಖತಪ್ತರಾಗಿ ಮಾತನಾಡಿದ ಅವರು, ತಮ್ಮ ಆರೋಗ್ಯ ಸ್ಥಿರವಾಗಿಲ್ಲ. ಪತ್ನಿಯು ಅಂತಿಮ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದಾರೆ. ಏಕೈಕ ಮಗಳೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತಮಗೆ ಸಹಾಯ ಮಾಡಲು ಜೈಲಿನ ಸಿಬ್ಬಂದಿಗೆ ಮಿತಿಗಳಿವೆ ಎಂದು ಹೇಳಿದರು.

‘ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದುನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇಪದೆ ಆಸ್ಪತ್ರೆಗೆ ಹೋಗುವುದು ದುಸ್ತರ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ’ ಎಂದು ಹೇಳಿದರು.

ಗೋಯಲ್‌ ಅವರ ನಿವೇದನೆ ಆಲಿಸಿದ ಬಳಿಕ ಮಾತನಾಡಿದ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು, ‘ನಾನು ಗೋಯಲ್‌ ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸಿದೆ. ಮಾತನಾಡುವಾಗ ಅವರ ಸಂಪೂರ್ಣ ದೇಹ ನಡುಗುತ್ತಿತ್ತು. ನಿಂತುಕೊಳ್ಳಲು ಅವರಿಗೆ ಸಹಾಯ ಬೇಕು. ಅವರಿಗೆ ಕಾಲು ಮಡಚಲೂ ಸಾಧ್ಯವಿಲ್ಲ’ ಎಂದರು. ಗೋಯಲ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಇ.ಡಿ ಪ್ರತಿಕ್ರಿಯೆ ನೀಡಿದೆ. ಮುಂದಿನ ವಿಚಾರಣೆಯನ್ನು ಜನವರಿ 16ಕ್ಕೆ ನ್ಯಾಯಾಲಯ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT