ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 605 ಹೊಸ ಪ್ರಕರಣ, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ನಾಲ್ವರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 605 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,002 ಕ್ಕೆ ಏರಿದೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.5 ಕೋಟಿಗೆ (4,50,18,792) ಏರಿಕೆಯಾಗಿದೆ.

ಕೇರಳದಲ್ಲಿ ಇಬ್ಬರು, ಕರ್ನಾಟಕ ಮತ್ತು ತ್ರಿಪುರಾದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದು, ಈ ಮೂಲಕ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5,33,396ಕ್ಕೆ ಏರಿಕೆಯಾಗಿದೆ. ಸದ್ಯ ಈವರೆಗೆ 4,44,81,341 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 

ಕೇರಳದಲ್ಲಿ, ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ (COPD) ಬಳಲುತ್ತಿದ್ದ 70 ವರ್ಷದ ಪುರುಷ ಮತ್ತು T2DM ಮತ್ತು HTN ಹೊಂದಿರುವ 81 ವರ್ಷದ ಪುರುಷ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ CA ಮತ್ತು TB ಹೊಂದಿದ್ದ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ತ್ರಿಪುರಾದಲ್ಲಿ ಇತರೆ ಯಾವುದೇ ರೋಗಗಳಿಲ್ಲದ ಓರ್ವ ವ್ಯಕ್ತಿಯೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.

ಜನವರಿ 7 ರಂದು ದೇಶದಲ್ಲಿ ಕೋವಿಡ್ ವಿರುದ್ಧದ 11,838 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವರದಿ ಮಾಡಿದೆ.

ಈಮಧ್ಯೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೋವಿಡ್ ಉಪತಳಿ ಜೆಎನ್.1 ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT