ಇವಿ ವಾಹನ ಅಪಘಾತ 
ದೇಶ

ಪ್ರಯೋಗಾರ್ಥ ಇವಿ ವಾಹನ ಅಪಘಾತದಲ್ಲಿ ಇಬ್ಬರು ಅರಣ್ಯ ವಲಯಾಧಿಕಾರಿ ಸೇರಿ ನಾಲ್ವರ ದುರ್ಮರಣ

ರಿಷಿಕೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ರೇಂಜ್ ಆಫೀಸರ್‌ಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾರೆ. 

ಡೆಹ್ರಾಡೂನ್: ರಿಷಿಕೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ರೇಂಜ್ ಆಫೀಸರ್‌ಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾರೆ. 

ಅಪಘಾತದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಅರಣ್ಯ ಸಚಿವ ಸುಬೋಧ್ ಉನಿಯಾಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ದೊರೆತ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆ ಅಧಿಕಾರಿಗಳು ಹೊಸ ಎಲೆಕ್ಟ್ರಿಕ್ ವಾಹನವನ್ನು ಪ್ರಯೋಗಿಸುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ವಿಚಾರಣೆ ವೇಳೆ ಎಲ್ಲರೂ ಗೌಹರಿ ರೇಂಜ್ ಗೆ ಹೋಗುತ್ತಿದ್ದರು. ಚೀಲಾ ರಸ್ತೆಯಲ್ಲಿ ಏಕಾಏಕಿ ಟೈರ್ ಒಡೆದ ಪರಿಣಾಮ ವಾಹನ ನಿಯಂತ್ರಣ ತಪ್ಪಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಈ ಅಪಘಾತದಲ್ಲಿ ರೇಂಜ್ ಆಫೀಸರ್ ಶೈಲೇಶ್ ಗಿಲ್ಡಿಯಾಲ್, ಉಪ ಅರಣ್ಯ ರೇಂಜ್ ಆಫೀಸರ್ ಪ್ರಮೋದ್ ಧ್ಯಾನಿ, ಸೈಫ್ ಅಲಿ ಖಾನ್ ಮತ್ತು ಕುಲರಾಜ್ ಸಿಂಗ್ ಸಾವನ್ನಪ್ಪಿದ್ದು, ರಾಕೇಶ್ ನೌಟಿಯಾಲ್ (ಪಶುವೈದ್ಯಾಧಿಕಾರಿ, ರಾಜಾಜಿ ರಾಷ್ಟ್ರೀಯ ಉದ್ಯಾನವನ) ಜೊತೆಗೆ ಚಾಲಕ ಹಿಮಾಂಶು ಗುಸೇನ್, ಅಂಕುಶ್, ಅಮಿತ್ ಸೆಂವಾಲ್ ಮತ್ತು ಅಶ್ವಿನಿ ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೇ ವೇಳೆ ರಾಜಾಜಿ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ರಕ್ಷಕ ಅಲೋಕ್ ಚಿಲ್ಲಾ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ. ಸದ್ಯ ಅವರು ನಾಪತ್ತೆಯಾಗಿದ್ದಾರೆ. ಎಲ್ಲಾ ಗಾಯಾಳುಗಳನ್ನು ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೇಂಜರ್ ಶೈಲೇಶ್ ಗಿಲ್ಡಿಯಾಲ್ ಅವರು ಪಿಎಂಒ ಕಚೇರಿಯ ಕಾರ್ಯದರ್ಶಿ ಮತ್ತು ಮಾಜಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಂಗೇಶ್ ಗಿಲ್ಡಿಯಾಲ್ ಅವರ ಸಹೋದರ ಎಂದು ಹೇಳಲಾಗುತ್ತದೆ. ಅಪಘಾತದ ನಂತರ ಮೃತರ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT