ವಿಪಕ್ಷ ನಾಯಕರು 
ದೇಶ

ಪ್ರತಿಪಕ್ಷಗಳ ಮೈತ್ರಿಕೂಟ INDIAಗೆ ಸಂಚಾಲಕರ ನೇಮಕ ಕುರಿತು ನಾಳೆ ನಿರ್ಧಾರ ಸಾಧ್ಯತೆ

ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಉನ್ನತ ನಾಯಕರು ಜನವರಿ 13 ರಂದು ವರ್ಚುವಲ್ ಮೂಲಕ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸೀಟು ಹಂಚಿಕೆ ಕುರಿತು ಮತ್ತು ಸಂಚಾಲಕರನ್ನು ನೇಮಕ ಮಾಡುವ...

ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಉನ್ನತ ನಾಯಕರು ಜನವರಿ 13 ರಂದು ವರ್ಚುವಲ್ ಮೂಲಕ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸೀಟು ಹಂಚಿಕೆ ಕುರಿತು ಮತ್ತು ಸಂಚಾಲಕರನ್ನು ನೇಮಕ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ಶನಿವಾರ ಬೆಳಗ್ಗೆ ನಡೆಯುವ ವರ್ಚುವಲ್ ಸಭೆಯಲ್ಲಿ ಭಾಗವಹಿಸುವುದಿಲ್ಲ. ಏಕೆಂದರೆ ಅವರು ಪೂರ್ವನಿಗದಿತ ಕಾರ್ಯಕ್ರಮಗಳನ್ನು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಯು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ಮಾಡಲು ಬಯಸುತ್ತಿದೆ. ಆದರೆ ಇದನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇಂದು ಸಂಜೆ ನಾಳಿನ ವರ್ಚುವಲ್ ಸಭೆಯ ಬಗ್ಗೆ ಪಕ್ಷಗಳಿಗೆ ತಿಳಿಸಲಾಗಿದೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕೆಲವು ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಅವರು ಹಾಜರಾಗದಿರಬಹುದು ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಇಂಡಿಯಾ ಮೈತ್ರಿಕೂಟ, ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಂಚಾಲಕ ನೇಮಕ ಸೇರಿದಂತೆ ಹಲವು ಸಮಸ್ಯೆಗಳು ಮೈತ್ರಿಕೂಟದಲ್ಲಿ ಇನ್ನೂ ಬಗೆಹರಿಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ