ಎನ್‌ಡಿ ಗುಪ್ತಾ - ಸ್ವಾತಿ ಮಲಿವಾಲ್ - ಸಂಜಯ್ ಸಿಂಗ್ 
ದೇಶ

ಸಂಜಯ್ ಸಿಂಗ್ ಸೇರಿ ಮೂವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂವರು ಅಭ್ಯರ್ಥಿಗಳು ಜನವರಿ 8 ರಂದು ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯಸಭೆ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದರು.

ಆಮ್ ಆದ್ಮಿ ಪಕ್ಷ, ಸಂಜಯ್ ಸಿಂಗ್ ಮತ್ತು ಎನ್‌ಡಿ ಗುಪ್ತಾ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡಿದ್ದು, ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯೂ) ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ಮೊದಲ ಬಾರಿಗೆ ರಾಜ್ಯಸಭೆಗೆ ಕಳುಹಿಸಿದೆ.

ಸುಶೀಲ್ ಗುಪ್ತಾ ಬದಲಿಗೆ ಸ್ವಾತಿ ಮಲಿವಾಲ್ ಆಯ್ಕೆಯಾಗಿದ್ದಾರೆ. ಎಎಪಿ ರಾಜ್ಯಸಭಾ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಚುನಾವಣಾಧಿಕಾರಿ ಆಶಿಶ್ ಕುಂದ್ರಾ ಅವರಿಂದ ಪ್ರಮಾಣಪತ್ರ ಪಡೆದರು.

ರಾಜ್ಯಸಭಾ ಸಂಸದರಾಗಿ ಆಯ್ಕೆಯಾದ ನಂತರ ಮಾತನಾಡಿದ ಸ್ವಾತಿ ಮಲಿವಾಲ್ ಅವರು, ತಮ್ಮ ಕರ್ತವ್ಯವನ್ನು ನಿಜವಾದ ಭಕ್ತಿ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT