ಎನ್‌ಡಿ ಗುಪ್ತಾ - ಸ್ವಾತಿ ಮಲಿವಾಲ್ - ಸಂಜಯ್ ಸಿಂಗ್ 
ದೇಶ

ಸಂಜಯ್ ಸಿಂಗ್ ಸೇರಿ ಮೂವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂವರು ಅಭ್ಯರ್ಥಿಗಳು ಜನವರಿ 8 ರಂದು ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯಸಭೆ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದರು.

ಆಮ್ ಆದ್ಮಿ ಪಕ್ಷ, ಸಂಜಯ್ ಸಿಂಗ್ ಮತ್ತು ಎನ್‌ಡಿ ಗುಪ್ತಾ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡಿದ್ದು, ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯೂ) ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ಮೊದಲ ಬಾರಿಗೆ ರಾಜ್ಯಸಭೆಗೆ ಕಳುಹಿಸಿದೆ.

ಸುಶೀಲ್ ಗುಪ್ತಾ ಬದಲಿಗೆ ಸ್ವಾತಿ ಮಲಿವಾಲ್ ಆಯ್ಕೆಯಾಗಿದ್ದಾರೆ. ಎಎಪಿ ರಾಜ್ಯಸಭಾ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸ್ವಾತಿ ಮಲಿವಾಲ್ ಮತ್ತು ಎನ್‌ಡಿ ಗುಪ್ತಾ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಚುನಾವಣಾಧಿಕಾರಿ ಆಶಿಶ್ ಕುಂದ್ರಾ ಅವರಿಂದ ಪ್ರಮಾಣಪತ್ರ ಪಡೆದರು.

ರಾಜ್ಯಸಭಾ ಸಂಸದರಾಗಿ ಆಯ್ಕೆಯಾದ ನಂತರ ಮಾತನಾಡಿದ ಸ್ವಾತಿ ಮಲಿವಾಲ್ ಅವರು, ತಮ್ಮ ಕರ್ತವ್ಯವನ್ನು ನಿಜವಾದ ಭಕ್ತಿ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT