ಸಾಧುಗಳ ಮೇಲೆ ಹಲ್ಲೆ 
ದೇಶ

ಪಶ್ಚಿಮ ಬಂಗಾಳ: ಮಕ್ಕಳ ಕಳ್ಳರೆಂಬ ಶಂಕೆ; ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ

ಮಕ್ಕಳ ಅಪಹರಣಕಾರರೆದು  ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.

ಲಕ್ನೋ: ಮಕ್ಕಳ ಅಪಹರಣಕಾರರೆದು  ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶ ಮೂವರು ಸಾಧುಗಳ ಮೇಲೆ ದಾಳಿಯಾಗಿದೆ. ನಿನ್ನೆ ಸಂಜೆ ವೇಳೆಗೆ ಜನರ ಗುಂಪು ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಅಮಾನವೀಯವಾಗಿ ನಡೆಸಿಕೊಂಡಿದೆ.

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಹಲ್ಲೆಯಾಗಿದ್ದು, ಮಕ್ಕಳ ಕಳ್ಳರು ಎಂದು ಅನುಮಾನ ವ್ಯಕ್ತಪಡಿಸಿದ ಒದೆ ನೀಡಿದ್ದಾರೆ. ಸಾಧುಗಳು ಓರ್ವ ವ್ಯಕ್ತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ವಾಹನದ ಮೂಲಕ ತೆರಳುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬವನ್ನು ಗಂಗಾಸಾಗರ್​​ನಲ್ಲಿ ಆಚರಣೆ ಮಾಡಲು ಹೋಗುತ್ತಿದ್ದರು.

ಇದು ಅಲ್ಲಿನ ಸ್ಥಳೀಯರಿಗೆ ಅನುಮಾನ ಬಂದಿದೆ. ಜನರ ಗುಂಪು ಬಂದು ಅವರನ್ನು ವಿಚಾರಣೆ ಮಾಡಿದೆ. ನಂತರ ಮನಬಂದಂತೆ ಥಳಿಸಿದ್ದಾರೆ. ವರದಿಗಳ ಪ್ರಕಾರ, ದಾರಿ ಮಧ್ಯೆ ಸಾಧುಗಳಿಗೆ ಹೇಗೆ ಹೋಗಬೇಕು ಎಂಬ ಗೊಂದಲ ಆಗಿದೆ. ಅದಕ್ಕೆ ರಸ್ತೆಯ ಪಕ್ಕದಲ್ಲಿ ಆಡುತ್ತಿದ್ದ ಮೂವರು ಹೆಣ್ಮಕ್ಕಳ ಬಳಿ ಕೇಳಿದ್ದಾರೆ.

ಆದರೆ ಬಾಲಕೀಯರು ಸಾಧುಗಳನ್ನು ನೋಡಿ ಹೆದರಿ ಕಣ್ಣೀರು ಇಡುತ್ತ ಓಡಿ ಹೋಗಿದ್ದಾರೆ. ಇದರಿಂದ ಸ್ಥಳೀಯರಿಗೆ ಅನುಮಾನ ಬಂದಿದೆ. ಕೆಲವು ಸ್ಥಳೀಯ ಇವರು ಅಪಹರಣಕಾರರು ಎಂದು ಆರೋಪಿಸಿ ಆಕ್ರೋಶಗೊಂಡು ಯುವಕರ ಗುಂಪೊಂದು ಸಾಧುಗಳ ಮೇಲೆ ಹಲ್ಲೆ ನಡೆಸಿದೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯ ಪೊಲೀಸರು ಮಧ್ಯ ಪ್ರವೇಶಿಸಿ ಸಾಧುಗಳನ್ನು ರಕ್ಷಿಸಿ ಕಾಸಿಪುರ ಪೊಲೀಸ್ ಠಾಣೆಗೆ ಕರೆದೊಯ್ದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಪುರುಲಿಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಬ್ಯಾನರ್ಜಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT