ಮಲ್ಲಿಕಾರ್ಜುನ ಖರ್ಗೆ 
ದೇಶ

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ: ಮೂಲಗಳು

ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಶನಿವಾರ ಒಮ್ಮತ ಮೂಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಶನಿವಾರ ಒಮ್ಮತ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಈ ಬಣದ ನಾಯಕರು ವರ್ಚುಯಲ್ ಸಭೆ ನಡೆಸಿದ್ದು, ಮೈತ್ರಿಕೂಟದ ವಿವಿಧ ಅಂಶಗಳು ಹಾಗೂ 2024ರ ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಚರ್ಚಿಸಿದ್ದಾರೆ 

ತೃಣಮೂಲ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಸಮಾಜವಾದಿ ಪಕ್ಷದ ನಾಯಕರು ಸಭೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ಅವರನ್ನು ನೇಮಿಸುವ ಬಗ್ಗೆ ಒಮ್ಮತ ಮೂಡಿದೆ. ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. 

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರನ್ನಾಗಿ ಮಾಡಲು ನಾಯಕರು ನಿರ್ಧರಿಸಿದ್ದಾರೆ, ಆದರೆ ಸಭೆಯಲ್ಲಿ ಭಾಗವಹಿಸದ ಪ್ರತಿನಿಧಿಗಳನ್ನು ಸಂಪರ್ಕಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ಹೇಳಿವೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು 28 ವಿರೋಧ ಪಕ್ಷಗಳು INDIA ವೇದಿಕೆಯಡಿ  ಒಗ್ಗೂಡಿವೆ. ಆದಾಗ್ಯೂ, ಮುಖ್ಯಸ್ಥರ ಆಯ್ಕೆ ಇಂಡಿಯಾ ಮೈತ್ರಿಕೂಟ ಎದುರಿಸುತ್ತಿರುವ ಹಲವಾರು ಸವಾಲುಗಳ ಒಂದು ಮುಖವಾಗಿದೆ. ಎಲ್ಲಾ ಪಕ್ಷಗಳ ನಡುವಿನ ಸೀಟು ಹಂಚಿಕೆ ಸಮಸ್ಯೆಯನ್ನು ಅವರು ಇನ್ನೂ ನಿಭಾಯಿಸಬೇಕಾಗಿದೆ.

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹಂಚಿಕೊಳ್ಳಲು ರಾಜ್ಯ ಕಾಂಗ್ರೆಸ್ ನಿರಾಕರಿಸಿದ ಕಾರಣ ಸಮಾಜವಾದಿ ಪಕ್ಷ ಕ್ಷಮಿಸುವ ಮನಸ್ಥಿತಿಯಲ್ಲಿ ಇಲ್ಲ ಎಂದು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಆರು ಸ್ಥಾನಗಳಿಗೆ ಕೇಂದ್ರ ನಾಯಕತ್ವದ ಬದ್ಧತೆಯನ್ನು ಗೌರವಿಸಲು  ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕಮಲ್ ನಾಥ್ ನಿರಾಕರಿಸಿದ್ದರು. ಮಧ್ಯ ಪ್ರದೇಶ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಅಖಿಲೇಶ್ ಯಾದವ್ ವಿರುದ್ಧ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಂತರ ಕಮಲ್ ನಾಥ್ ಅವರನ್ನು ಉನ್ನತ ಹುದ್ದೆಯಿಂದ ವಜಾಗೊಳಿಸಲಾಗಿದೆ. 

ಎಎಪಿ ಜೊತೆಗಿನ ಕಾಂಗ್ರೆಸ್‌ನ ಚರ್ಚೆಯೂ ವಿವಾದಾಸ್ಪದವಾಗಿದೆ. ಪಕ್ಷ ದೆಹಲಿಯಲ್ಲಿ 4 ಸ್ಥಾನಗಳು ಮತ್ತು ಪಂಜಾಬ್‌ನಲ್ಲಿ ಏಳು ಸ್ಥಾನಗಳನ್ನು ಬಯಸಿದ್ದರೂ, ಎಎಪಿ ಅದನ್ನು ಒಪ್ಪಿಕೊಳ್ಳಲು ಸಿದ್ಧವಾಗಿಲ್ಲ. ದೆಹಲಿ ಮತ್ತು ಪಂಜಾಬ್ ಎರಡರಲ್ಲೂ ಆಡಳಿತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಬಯಸುತ್ತದೆ. ಎಎಪಿ ಗೋವಾ, ಹರಿಯಾಣ ಮತ್ತು ಗುಜರಾತ್‌ನಲ್ಲಿಯೂ ಸ್ಪರ್ಧಿಸಲು ಬಯಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT