ಸಾಂಕೇತಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಗೋರಕ್ಷಕ ಗುಂಪಿನ ಮುಖ್ಯಸ್ಥನ ವಿರುದ್ಧ ಗೋಹತ್ಯೆ ಪ್ರಕರಣ!

ಖ್ಯಾತ ಶಾಸ್ತ್ರೀಯ ಸಂಗೀತಗಾರ್ತಿ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತೆ ಪ್ರಭಾ ಅತ್ರೆ (92) ಪುಣೆಯಲ್ಲಿ ಇಂದು ನಿಧನರಾದರು. 

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಗೋರಕ್ಷಕ ಗುಂಪಿನ ಮುಖ್ಯಸ್ಥನೊಬ್ಬನ ವಿರುದ್ಧ ಗೋಹತ್ಯೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈತ ಗೋಹತ್ಯೆಯಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ. ಶುಕ್ರವಾರದಂದು ಗೋ ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಬಳಿಕ ಬರೇಲಿಯಲ್ಲಿ ಗೋರಕ್ಷಕ ಗುಂಪಿನ ಮುಖ್ಯಸ್ಥನೊಬ್ಬ ಇದರಲ್ಲಿ ತೊಡಗಿದ್ದ ಮಾಹಿತಿ ಬಹಿರಂಗವಾಗಿದೆ. ಗೋರಕ್ಷಕ ಕರ್ಣಿ ಸೇನಾದ ಬರೇಲಿ ವಿಭಾಗದ ಮುಖ್ಯಸ್ಥ ರಾಹುಲ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈತ ಗೋ ಕಳ್ಳಸಾಗಣೆ ಮಾಡುತ್ತಿದ್ದ ಮೂವರ ಜೊತೆಗಿದ್ದ ಎಂದು ತಿಳಿದುಬಂದಿದೆ.

ಇಲ್ಲಿನ ಭೋಜಿಪುರದ ದೇವರನಿಯಾ ನದಿಯ ಬಳಿ ಸಿಂಗ್ ಇತರ ನಾಲ್ವರೊಂದಿಗೆ ಗೋಹತ್ಯೆ ಮಾಡುತ್ತಿದ್ದ ಎಂದು ಆರೋಪಿಸಿ ಪೊಲೀಸರು ಆ ಪ್ರದೇಶವನ್ನು ಮುತ್ತಿಗೆ ಹಾಕಿದರು ಎಂದು ಸರ್ಕಲ್ ಆಫೀಸರ್ ಹರ್ಷ್ ಮೋದಿ ತಿಳಿಸಿದ್ದಾರೆ.

ಆರೋಪಿಗಳು ಶರಣಾಗಲು ನಿರಾಕರಿಸಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎನ್‌ಕೌಂಟರ್‌ನ ನಂತರ ಪೊಲೀಸರು ಪ್ರತಿದಾಳಿಗಾಗಿ ಗುಂಡು ಹಾರಿಸಿದ್ದು, ಮೊಹಮ್ಮದ್ ಸಯೀದ್ ಖಾನ್, ದೇವೇಂದ್ರ ಕುಮಾರ್ ಮತ್ತು ಅಕ್ರಮ್ ಎಂಬ ಮೂವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

SCROLL FOR NEXT