ಸಂಗ್ರಹ ಚಿತ್ರ 
ದೇಶ

ನಾಯಿಗಳ ಹಾವಳಿ ಹೆಚ್ಚಳ: ಏಳು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು!

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಪಾಲ್‌: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದ್ದು ಈ ಸಂಬಂಧ ಪೊಲೀಸರು ಮತ್ತು ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯಿಗಳ ದಾಳಿಯಿಂದ ಮಗು ಮೃತಪಟ್ಟ ದಿನವೇ ಮನೆಯವರು ಹೂತಿಟ್ಟಿದ್ದ ಮಗುವಿನ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಶನಿವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು.

ಮಗುವಿನ ಪೋಷಕರು ದಿನಗೂಲಿ ಕೆಲಸ ಮಾಡುತ್ತಿದ್ದರು. ಅಯೋಧ್ಯಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ನಿಲ್ಹಾರೆ ಅವರು ಘಟನೆಗೆ ಮುನ್ನ ಮಗುವಿನ ತಾಯಿ ತನಗೆ ಹತ್ತಿರದಲ್ಲಿ ಸ್ವಲ್ಪ ಕೆಲಸವಿದೆ ಎಂದು ಮಗುವನ್ನು ನೆಲದ ಮೇಲೆ ಮಲಗಿಸಿದ್ದರು. ಹೀಗಾಗಿ ನಾಯಿಗಳ ದಂಡು ಮಗುವನ್ನು ಕಚ್ಚಿ ಎಳೆದೊಯ್ದಿದೆ ಎಂದು ಅವರು ಹೇಳಿದರು.

ಅಕ್ಕಪಕ್ಕದ ಜನರು ಈ ಭೀಕರ ಘಟನೆಯನ್ನು ನೋಡಿ ಕೂಗಾಡಿದ್ದಾರೆ. ಆದರೆ ಅಷ್ಟರಲ್ಲಿ ನಾಯಿಗಳು ಮಗುವಿನ ಒಂದು ಕೈಯನ್ನು ಕಚ್ಚಿದ್ದವು. ಅಲ್ಲದೆ ಮಗುವಿನ ದೇಹವನ್ನು ಕಚ್ಚಿ ಎಳೆದಾಡಿದ್ದರಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಣಾ ಜಿಲ್ಲೆಯವರಾದ ಮಗುವಿನ ಪೋಷಕರು ಭೋಪಾಲ್ ಬಳಿಯ ಹಳ್ಳಿಯೊಂದರಲ್ಲಿ ಶವವನ್ನು ಸಮಾಧಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿದ್ದಾರೆ.

ಏತನ್ಮಧ್ಯೆ, ಜಿಲ್ಲಾಡಳಿತವು ಬಾಲಕನ ಕುಟುಂಬಕ್ಕೆ 50,000 ರೂಪಾಯಿ ಆರ್ಥಿಕ ಸಹಾಯವನ್ನು ನೀಡಿದ್ದು, ಇನ್ನೂ 50,000 ರೂಪಾಯಿಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಯೋಧ್ಯಾ ನಗರ ಪ್ರದೇಶದಿಂದ ಎಂಟು ಬೀದಿ ನಾಯಿಗಳನ್ನು ಹಿಡಿದಿದೆ. ಅಲ್ಲದೆ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ನಾಗರಿಕ ಸಂಸ್ಥೆಯನ್ನು ಕೋರಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT