ಆಮ್ ಆದ್ಮಿ ಪಕ್ಷ 
ದೇಶ

ಉತ್ತರಾಖಂಡ್ ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಭಿನ್ನಮತ: ಪಕ್ಷದಿಂದ ಹೊರಬಂದ 50 ಹಿರಿಯ ನಾಯಕರು!

ಉತ್ತರಾಖಂಡ್ ನ ಆಮ್ ಆದ್ಮಿ ಪಕ್ಷದಲ್ಲಿ ತೀವ್ರ ಭಿನ್ನಮತ ಎದುರಾಗಿದ್ದು, 50 ಮಂದಿ ಹಿರಿಯ ನಾಯಕರು ಪಕ್ಷ ತೊರೆದಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡ್ ನ ಆಮ್ ಆದ್ಮಿ ಪಕ್ಷದಲ್ಲಿ ತೀವ್ರ ಭಿನ್ನಮತ ಎದುರಾಗಿದ್ದು, 50 ಮಂದಿ ಹಿರಿಯ ನಾಯಕರು ಪಕ್ಷ ತೊರೆದಿದ್ದಾರೆ.ಪಕ್ಷದ ರಾಜ್ಯ ಸಮನ್ವಯಕಾರ ಜೋತ್ ಸಿಂಗ್ ಬಿಸ್ತ್ ಸೇರಿದಂತೆ 50 ಮಂದಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ 2 ವರ್ಷಗಳಿಂದ ಆಮ್ ಆದ್ಮಿ ಪಕ್ಷ ಉತ್ತರಾಖಂಡ್ ನಲ್ಲಿ ನೆಲೆಕಂಡುಕೊಳ್ಳಲು ಯತ್ನಿಸುತ್ತಿದ್ದು, ಈಗ ತೀವ್ರ ಹಿನ್ನಡೆಯುಂಟಾಗಿದೆ.

ಪಕ್ಷದ ರಾಜ್ಯ ವಕ್ತಾರ ಆರ್.ಪಿ.ರಾತೂರಿ, ರಾಜೇಂದ್ರ, ಕಮಲೇಶ್ ರಾಮನ್ ಸೇರಿದಂತೆ ಹಲವು ಪ್ರಮುಖ ನಾಯಕರು ಪಕ್ಷ ತೊರೆದಿದ್ದಾರೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಜೋತ್ ಸಿಂಗ್ ಬಿಶ್ತ್, "ರಾಜ್ಯದಾದ್ಯಂತ 50 ಕ್ಕೂ ಹೆಚ್ಚು ನಾಯಕರು ಭಾನುವಾರ ಆಮ್ ಆದ್ಮಿ ಪಕ್ಷವನ್ನು ತೊರೆದಿದ್ದಾರೆ ಮತ್ತು ಸೋಮವಾರದ ವೇಳೆಗೆ ಅವರ ಸಂಖ್ಯೆ 200 ಕ್ಕಿಂತ ಹೆಚ್ಚಿರುವ ಸಾಧ್ಯತೆ ಇದೆ ಎಂದು ಹೇಳಿದರು. 

"ಕಳೆದ ನಾಲ್ಕು ತಿಂಗಳಿಂದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಗಿದ್ದರೂ ಉತ್ತರಾಖಂಡದ ಉನ್ನತ ನಾಯಕತ್ವದಿಂದ ಮಾಡಲ್ಪಟ್ಟಿದೆ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಈ ಕ್ರಮದ ಕೊರತೆಯು ನನ್ನ ನಿರಾಶೆಗೆ ಕಾರಣವಾಯಿತು ಮತ್ತು ಅಂತಿಮವಾಗಿ ನನ್ನ ರಾಜೀನಾಮೆಗೆ ಕಾರಣವಾಯಿತು, ”ಎಂದು ಅವರು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT