ಹೇಮಾಮಾಲಿನಿ 
ದೇಶ

ರಾಮ ಪ್ರಾಣ ಪ್ರತಿಷ್ಠಾ ಸಮಾರಂಭ: ಹಿರಿಯ ನಟಿ ಹೇಮಾಮಾಲಿನಿಯಿಂದ ರಾಮಾಯಣ ಆಧಾರಿತ ನೃತ್ಯ ರೂಪಕ!

ಅಯೋಧ್ಯೆಯಲ್ಲಿ  ಇದೇ ತಿಂಗಳ 22 ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ಬಿಜೆಪಿ ಸಂಸದರು ಆಗಿರುವ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಅವರಿಂದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ನೃತ್ಯ ರೂಪಕವನ್ನು ಆಯೋಜಿಸಲಾಗಿದೆ.

ಅಯೋಧ್ಯೆ: ಅಯೋಧ್ಯೆಯಲ್ಲಿ  ಇದೇ ತಿಂಗಳ 22 ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ಬಿಜೆಪಿ ಸಂಸದರು ಆಗಿರುವ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಅವರಿಂದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ನೃತ್ಯ ರೂಪಕವನ್ನು ಆಯೋಜಿಸಲಾಗಿದೆ. ಈ ಕುರಿತು ಅವರು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.

ಜನರು ವರ್ಷಗಳಿಂದ ಕಾಯುತ್ತಿದ್ದ ರಾಮಮಂದಿರದ ಪ್ರಾಣಪ್ರತಿಷ್ಠೆಯ ಸಮಯದಲ್ಲಿ ಮೊದಲ ಬಾರಿಗೆ ಅಯೋಧ್ಯೆಗೆ ಬರುತ್ತಿದ್ದೇನೆ. ಜನವರಿ 17 ರಂದು ಅಯೋಧ್ಯಾಧಾಮದಲ್ಲಿ ರಾಮಾಯಣ ಆಧಾರಿತ ನೃತ್ಯ ರೂಪಕವನ್ನು ಪ್ರಸ್ತುತಪಡಿಸಲಿದ್ದೇನೆ ಎಂದು ತಿಳಿಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮ ಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶ, ವಿದೇಶದಿಂದ ಹಲವಾರು ವಿವಿಐಪಿಗಳಿಗೆ ಆಹ್ವಾನ ನೀಡಲಾಗಿದೆ.

ರಾಮ ಲಲ್ಲಾ  ಪ್ರಾಣ-ಪ್ರತಿಷ್ಠಾ ಪ್ರಧಾನ ಸಮಾರಂಭದ ಒಂದು ವಾರದ ಮೊದಲು ವೈದಿಕ ಆಚರಣೆಗಳು ಜನವರಿ 16 ರಂದು ಪ್ರಾರಂಭವಾಗುತ್ತವೆ. ವಾರಣಾಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮ್ ಲಲ್ಲಾ ಅವರ ಪಟ್ಟಾಭಿಷೇಕದ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

ಮಜಾ ಭಾರತ-ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು!

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

'ಗುರು ದ್ರೋಹಿ'; ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ, ಧಾರ್ಮಿಕ ಗುರುಗಳ ಆಕ್ರೋಶ

SCROLL FOR NEXT