ಸೋನಿಯಾ ಗಾಂಧಿ 
ದೇಶ

ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲು

ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 

ಹೈದರಾಬಾದ್: ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅವಿಭಜಿತ ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನಲ್ಲಿ ಸೋನಿಯಾ ಗಾಂಧಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಸಂಬಂಧವಿದೆ ಎಂದಿದ್ದ ಸ್ವಾಮಿ ಅವರ ಹೇಳಿಕೆಗಳ ವಿರುದ್ಧ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಮಲ್ಲು ರವಿ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜಶೇಖರ ರೆಡ್ಡಿ ಅವರು 2009ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಸ್ವಾಮಿ ಸುಳ್ಳು ಮಾಹಿತಿ ಹಬ್ಬಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ನಗರದ ಬೇಗಂಬಜಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (ಸಾರ್ವಜನಿಕ ದೌರ್ಜನ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: 4 ಬಾರಿ ಆಂತರಿಕ ವ್ಯವಹಾರದಲ್ಲಿ khameni ಹಸ್ತಕ್ಷೇಪ!; "ಮೌನವಾಗಿರಬೇಡಿ" ಎಂದಿದ್ದ ಇರಾನ್ ಆಗ್ರಹಕ್ಕೆ ಮೌನ ಮುರಿದ PM ಮೋದಿ ಹೇಳಿದ್ದಿಷ್ಟು...

ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಕುವೈತ್ ನಲ್ಲಿ ಅಮೆರಿಕಾದ ಬಲಿಷ್ಠ F15 ಹೊಡೆದುರುಳಿಸಿದ ಇರಾನ್?

ಅಮೆರಿಕ ಎದುರು ಶರಣಾಯ್ತಾ ಇರಾನ್?: ಒಮಾನ್ ಮಧ್ಯಸ್ಥಿಕೆ: ಈ ಬಗ್ಗೆ ಇರಾನ್ ಹೇಳಿದ್ದೇನು?

ಪೈಲಟ್ ಸೀಟಿನ ಪಕ್ಕದಲ್ಲಿ ಮಲಗಿರುವ VSR ವೆಂಚರ್ಸ್ ಮಾಲೀಕ: ಶಾಕಿಂಗ್ Video ಹಂಚಿಕೊಂಡ ಅಜಿತ್ ಪವಾರ್ ಪುತ್ರ, ಬಂಧನಕ್ಕೆ ಒತ್ತಾಯ!

SCROLL FOR NEXT