ಮಿಲಿಂದ್ ದಿಯೋರಾ 
ದೇಶ

ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸಂಬಂಧ ಮುರಿದುಕೊಂಡ ಮಿಲಿಂದ್ ಡಿಯೋರಾ; ಪಕ್ಷ ತೊರೆದ ಬಳಿಕ ಹೇಳಿದ್ದೇನು?

ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್, ತಮ್ಮ ರಾಜೀನಾಮೆಯನ್ನು ದೃಢಪಡಿಸಿದ್ದಾರೆ ಮತ್ತು 'ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದೊಂದಿಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧ ಕೊನೆಗೊಂಡಿದೆ' ಎಂದಿದ್ದಾರೆ.

'ಇಷ್ಟು ವರ್ಷ ನನಗೆ ಬೆಂಬಲ ನೀಡಿದ ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ನಾನು ಕೃತಜ್ಞನಾಗಿದ್ದೇನೆ' ಎಂದು ಅವರು ಹೇಳಿದರು.

ಮಿಲಿಂದ್ ದಿಯೋರಾ ಅವರು 2012 ರಿಂದ 2014 ರವರೆಗೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕೇಂದ್ರದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಶಿಪ್ಪಿಂಗ್ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ದಿಯೋರಾ ಅವರು ಈ ಹಿಂದೆ ಪ್ರತಿನಿಧಿಸಿದ್ದ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಶಿವಸೇನೆ (ಯುಬಿಟಿ) ಹಕ್ಕು ಸಾಧಿಸಿರುವ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT