ಸಿಎಂ ಏಕನಾಥ್ ಶಿಂಧೆ, ಮಿಲಿಂದ್ ದಿಯೋರಾ ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಮಿಲಿಂದ್ ದಿಯೋರಾ ಶಿವಸೇನಾ ಸೇರುವುದಾದರೆ ಸ್ವಾಗತ: ಸಿಎಂ ಏಕನಾಥ್ ಶಿಂಧೆ

ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿರಿಯ ನಾಯಕ ಮಿಲಿಂದ್ ದಿಯೋರಾ, ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮುಂಬೈ: ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿರಿಯ ನಾಯಕ ಮಿಲಿಂದ್ ದಿಯೋರಾ, ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ದಿಯೋರಾ ರಾಜೀನಾಮೆ ವಿಷಯ ಕೇಳಿದ್ದೇನೆ. ಅವರು ಒಂದು ವೇಳೆ ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಸುದ್ದಿಗಾರರಿಗೆ ತಿಳಿಸಿದರು.

ಶನಿವಾರ  ರಾಜೀನಾಮೆ ಊಹಾಪೋಹಗಳು ಕೇವಲ ವದಂತಿ ಎಂದಿದ್ದ ದಿಯೋರಾ, ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅದನ್ನು ದೃಢಪಡಿಸಿದ್ದಾರೆ ಮತ್ತು 'ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದೊಂದಿಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧ ಕೊನೆಗೊಂಡಿದೆ' ಎಂದಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ನಿಂದ ಅಸಮಾಧಾನಗೊಂಡಿರುವ ಮಿಲಿಂದ್ ದಿಯೋರಾ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆಯಿದೆ ಎಂದು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಇದೀಗ ಅವರ ರಾಜೀನಾಮೆ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಸ್ವಾಗತಿಸುವ ಹೇಳಿಕೆ ನೀಡಿದ್ದು, ದಿಯೋರಾ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!