ಸಿಎಂ ಏಕನಾಥ್ ಶಿಂಧೆ, ಮಿಲಿಂದ್ ದಿಯೋರಾ ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಮಿಲಿಂದ್ ದಿಯೋರಾ ಶಿವಸೇನಾ ಸೇರುವುದಾದರೆ ಸ್ವಾಗತ: ಸಿಎಂ ಏಕನಾಥ್ ಶಿಂಧೆ

ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿರಿಯ ನಾಯಕ ಮಿಲಿಂದ್ ದಿಯೋರಾ, ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮುಂಬೈ: ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿರಿಯ ನಾಯಕ ಮಿಲಿಂದ್ ದಿಯೋರಾ, ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ದಿಯೋರಾ ರಾಜೀನಾಮೆ ವಿಷಯ ಕೇಳಿದ್ದೇನೆ. ಅವರು ಒಂದು ವೇಳೆ ಶಿವಸೇನಾ ಸೇರುವುದಾದರೆ ಸ್ವಾಗತಿಸುವುದಾಗಿ ಸುದ್ದಿಗಾರರಿಗೆ ತಿಳಿಸಿದರು.

ಶನಿವಾರ  ರಾಜೀನಾಮೆ ಊಹಾಪೋಹಗಳು ಕೇವಲ ವದಂತಿ ಎಂದಿದ್ದ ದಿಯೋರಾ, ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅದನ್ನು ದೃಢಪಡಿಸಿದ್ದಾರೆ ಮತ್ತು 'ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದೊಂದಿಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧ ಕೊನೆಗೊಂಡಿದೆ' ಎಂದಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ನಿಂದ ಅಸಮಾಧಾನಗೊಂಡಿರುವ ಮಿಲಿಂದ್ ದಿಯೋರಾ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆಯಿದೆ ಎಂದು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಇದೀಗ ಅವರ ರಾಜೀನಾಮೆ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಸ್ವಾಗತಿಸುವ ಹೇಳಿಕೆ ನೀಡಿದ್ದು, ದಿಯೋರಾ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT