ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರು 
ದೇಶ

ಮಕರ ಸಂಕ್ರಾಂತಿಯ ದಿನ ಅಯೋಧ್ಯೆಗೆ ಧಾವಿಸಿದ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು!

ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಪವಿತ್ರ ಮಕರ ಸಂಕ್ರಾಂತಿ ಹಬ್ಬದ ದಿನ ಅಯೋಧ್ಯೆಗೆ ಧಾವಿಸಿದ್ದಾರೆ. 

ಅಯೋಧ್ಯೆ: ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಪವಿತ್ರ ಮಕರ ಸಂಕ್ರಾಂತಿ ಹಬ್ಬದ ದಿನ ಅಯೋಧ್ಯೆಗೆ ಧಾವಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ನ ಹೈಕಮಾಂಡ್ ನಿರ್ಧರಿಸಿದ್ದರೂ, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. 

ಇದು ತಮ್ಮ ಖಾಸಗಿ ಭೇಟಿಯಾಗಿದ್ದು, ಭಗವಾನ್ ರಾಮ ಎಲ್ಲರಿಗೂ ಸೇರಿದವರಾಗಿದ್ದಾರೆ, ಆದ್ದರಿಂದ ತಾವು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಅಯೋಧ್ಯೆಗೆ ತೆರಳಿದ್ದ ಕಾಂಗ್ರೆಸ್ ನಾಯಕರು ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಸರಯೂ ನದಿಯಲ್ಲಿ ಸ್ನಾನ ಮಾಡಿ, ರಾಮಲಲ್ಲಾ ದರ್ಶನ ಮಾಡಿ ಹನುಮಗಿರಿಗೂ ಭೇಟಿ ನೀಡಿದರು. 

ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಯುಪಿ ನಾಯಕ ಅವಿನಾಶ್ ಪಾಂಡೆ, ಅವರ ಕ್ರಮವು ಪಕ್ಷದ ರೇಖೆಯಿಂದ ವಿಚಲನವಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಯುಪಿ ನಾಯಕ ಅವಿನಾಶ್ ಪಾಂಡೆ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು "ನಂಬಿಕೆ ಇರುವವರು ಹೋಗಬಹುದು" ಎಂದು ಬಹಿರಂಗವಾಗಿ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT