ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯೆ: ನಾಳೆಯಿಂದ ಜ.22ರವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ!

ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾನ ಸಮಾರಂಭ ಅಂಗವಾಗಿ ಹಳಿ ದ್ವಿಗುಣ ಹಾಗೂ ವಿದ್ಯುದ್ದೀಕರಣವನ್ನು ಆದ್ಯತೆ ಮೇಲೆ ಕೈಗೊಂಡಿರುವುದಾಗಿ ಜನವರಿ 16 ರಿಂದ 22ರವರೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾನ ಸಮಾರಂಭ ಅಂಗವಾಗಿ ಹಳಿ ದ್ವಿಗುಣ ಹಾಗೂ ವಿದ್ಯುದ್ದೀಕರಣ ವನ್ನು ಆದ್ಯತೆ ಮೇಲೆ ಕೈಗೊಂಡಿರುವುದಾಗಿ ಜನವರಿ 16 ರಿಂದ 22 ರವರೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ವಂದೇ ಭಾರತ್ ಸೇರಿದಂತೆ ಹತ್ತು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಡೂನ್ ಎಕ್ಸ್‌ಪ್ರೆಸ್ ಸೇರಿದಂತೆ 35 ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ. ಇನ್ನು 14 ರೈಲುಗಳ ಸಂಚಾರಕ್ಕೂ ತೊಂದರೆಯಾಗಲಿದೆ.

ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಅಯೋಧ್ಯೆಯ ಕ್ಯಾಂಟ್‌ನಿಂದ ಆನಂದ್ ವಿಹಾರ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ನ್ನುಇಂದಿನವರೆಗೂ ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಜನವರಿ 22ರವರೆಗೆ ವಿಸ್ತರಿಸಲಾಗಿದೆ ಎಂದು ಉತ್ತರ ರೈಲ್ವೆಯ ಲಕ್ನೋ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ರೇಖಾ ಶರ್ಮಾ ತಿಳಿಸಿದ್ದಾರೆ. 

ರಾಮ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಆದ್ಯತೆಯ ಮೇಲೆ ಹಳಿ ದಿಗ್ವುಣ ಹಾಗೂ ವಿದ್ಯುದೀಕರಣ ಕೈಗೊಳ್ಳಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT