ಸರ್ವರ್ 
ದೇಶ

ಹೊಸ ಸಂಹಿತೆಗಳ ಜಾರಿಗೂ ಮುನ್ನ ಅಪರಾಧಿಗಳ ಡೇಟಾ ಸಂಗ್ರಹ, ವಿನಿಮಯಕ್ಕೆ ಪ್ರತ್ಯೇಕ ಕ್ಲೌಡ್ ಸರ್ವರ್

ದಂಡಕ್ಕಿಂತಲೂ ಡೇಟಾ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವಂತೆ ದೇಶದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಒತ್ತಾಯಿಸಿದ್ದಾರೆ. 

ನವದೆಹಲಿ: ದಂಡಕ್ಕಿಂತಲೂ ಡೇಟಾ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವಂತೆ ದೇಶದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಒತ್ತಾಯಿಸಿದ್ದಾರೆ. 

ಈ ನಡುವೆ ಕೇಂದ್ರ ಗೃಹ ಸಚಿವಾಲಯ, ನ್ಯಾಯಾಲಯಗಳ ಎಲ್ಲಾ ದಾಖಲೆಗಳು, ಎಫ್‌ಐಆರ್‌ಗಳು, ಚಾರ್ಜ್ ಶೀಟ್‌ಗಳು ಮತ್ತು ಫಿಂಗರ್‌ಪ್ರಿಂಟ್‌ಗಳನ್ನು ಒಳಗೊಂಡಂತೆ ಡಿಜಿಟಲ್ ಅಪರಾಧ ಮತ್ತು ಕ್ರಿಮಿನಲ್ ದಾಖಲೆಗಳ ಸಂಗ್ರಹಣೆಗಾಗಿ ಪ್ರತ್ಯೇಕ, ದೇಶೀಯ ಕ್ಲೌಡ್ ಸರ್ವರ್ ನ್ನು ಅಭಿವೃಧ್ದಿಪಡಿಸಲು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (BPR&D) ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಮತ್ತು ಭಾರತೀಯ ಸಾಕ್ಷಿ ಅಧಿನಿಯಂ ಎಂಬ ಮೂರು ಕಾಯಿದೆಗಳ ಅನುಷ್ಠಾನ ಸನ್ನಿಹಿತದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 

ಸಮಿತಿಯು BPR&D ನ ಡೈರೆಕ್ಟರ್ ಜನರಲ್ ನೇತೃತ್ವದಲ್ಲಿರುತ್ತದೆ ಎಂದು ಗೃಹ ಸಚಿವಾಲಯದ ಮೂಲಗಳು ದೃಢಪಡಿಸಿವೆ. ಈ ಸಮಿತಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (NIC), ಮತ್ತು ಸೈಬರ್ ಭದ್ರತಾ ಸಂಸ್ಥೆ "ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-) ಸದಸ್ಯರನ್ನು ಒಳಗೊಂಡಿರುತ್ತದೆ. 

ಕ್ಲೌಡ್ ಸರ್ವರ್ ಲಭ್ಯವಾದ ನಂತರ, ಸಂಬಂಧಪಟ್ಟ ಪೊಲೀಸ್ ಠಾಣೆಗಳು ಮತ್ತು ಇ-ಕೋರ್ಟ್‌ಗಳಿಂದ ಸಂಗ್ರಹಿಸಲಾದ ಡೇಟಾವನ್ನು ಹಂಚಿಕೊಳ್ಳಲು ಮತ್ತು ಮರುಪಡೆಯಲು, ನ್ಯಾಯಾಲಯಗಳಲ್ಲಿ ತ್ವರಿತ ವಿಚಾರಣೆಗೆ ಅನುಕೂಲವಾಗುವಂತೆ ಕಾರ್ಯವಿಧಾನವನ್ನು ರೂಪಿಸಲಾಗುವುದು ಎಂದು ಮೂಲಗಳು ಉಲ್ಲೇಖಿಸಿವೆ.

DG BPR&D ಅಡಿಯಲ್ಲಿನ ಸಮಿತಿ ಹೊಸ ಕ್ರಿಮಿನಲ್ ಕಾನೂನುಗಳನ್ನು ಕಾರ್ಯಗತಗೊಳಿಸಲು ರಾಜ್ಯ ಮತ್ತು ಕೇಂದ್ರ ಎರಡೂ ಸಂಸ್ಥೆಗಳಿಂದ ಡೇಟಾದ ಮಾಹಿತಿಯನ್ನು ಪಡೆಯುವುದಕ್ಕೆ ನೀತಿ ಚೌಕಟ್ಟನ್ನು ರೂಪಿಸುತ್ತದೆ, ಲಭ್ಯವಿರುವ ಎಲ್ಲಾ ಮಾಹಿತಿಯು ಯಾವಾಗಲೂ ಸುರಕ್ಷಿತ ಮತ್ತು ಸಂರಕ್ಷಿತ ವಾತಾವರಣದಲ್ಲಿ ಉಳಿಯುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT