ಮಮತಾ ಬ್ಯಾನರ್ಜಿ 
ದೇಶ

ಜನವರಿ 22 ರಂದು ಕೋಲ್ಕತ್ತಾದಲ್ಲಿ 'ಸಾಮರಸ್ಯ ರ್ಯಾಲಿ' ಘೋಷಿಸಿದ ಮಮತಾ ಬ್ಯಾನರ್ಜಿ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ 'ಸಾಮರಸ್ಯ ರ್ಯಾಲಿ' ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ 'ಸಾಮರಸ್ಯ ರ್ಯಾಲಿ' ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಘೋಷಿಸಿದ್ದಾರೆ.

ಆಡಳಿತಾರೂಢ ಟಿಎಂಸಿಯ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಜನವರಿ 22 ರಂದು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್‌ನಿಂದ 'ಸಾಮರಸ್ಯ ರ್ಯಾಲಿ' ಪ್ರಾರಂಭಿಸಲಿದ್ದಾರೆ.

ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ಸೌಹಾರ್ದ ಸಮಾವೇಶದಲ್ಲಿ ಪಾಲ್ಗೊಳ್ಳುತ್ತೇನೆ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಟಿಎಂಸಿ ಆಯೋಜಿಸಲಿರುವ ಈ ರ್ಯಾಲಿ, ಪಾರ್ಕ್ ಸರ್ಕಸ್ ಮೈದಾನದಲ್ಲಿ ಮುಕ್ತಾಯಗೊಳ್ಳುವ ಮುನ್ನ ಮಸೀದಿಗಳು, ಚರ್ಚ್‌ಗಳು ಮತ್ತು ಗುರುದ್ವಾರಗಳು ಸೇರಿದಂತೆ ವಿವಿಧ ಧರ್ಮಗಳ ಪೂಜಾ ಸ್ಥಳಗಳಿಗೆ ಭೇಟಿ ನೀಡಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ರ್ಯಾಲಿಗಳನ್ನು ಆಯೋಜಿಸುವಂತೆ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

‘ಪ್ರಾಣ ಪ್ರತಿಷ್ಠಾಪನೆ’ ಅಥವಾ ಪಟ್ಟಾಭಿಷೇಕ ರಾಜಕಾರಣಿಗಳ ಕೆಲಸವಲ್ಲ. ಅದು ಪುರೋಹಿತರ ಕೆಲಸ. ಮೂಲಸೌಕರ್ಯ ಕಲ್ಪಿಸುವುದು ನಮ್ಮ ಕೆಲಸ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಟಾಂಗ್ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT