ರಾಹುಲ್ ನಾರ್ವೇಕರ್ - ಏಕನಾಥ್ ಶಿಂಧೆ 
ದೇಶ

ಶಾಸಕರ ಅನರ್ಹತೆ ಪ್ರಕರಣ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಬಾಂಬೆ ಹೈಕೋರ್ಟ್ ನೋಟಿಸ್

ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿದೆ.

ವಿಭಾಗೀಯ ಪೀಠ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.

ಠಾಕ್ರೆ ಬಣದ 14 ಶಾಸಕರ ಅನರ್ಹತೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 10 ರಂದು ಸ್ಪೀಕರ್ ನಾರ್ವೇಕರ್ ಅವರು ವಜಾಗೊಳಿಸಿದ್ದು, ಈ ಆದೇಶವನ್ನು ಪ್ರಶ್ನಿಸಿ ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಸ್ಪೀಕರ್ ಆದೇಶ ಕಾನೂನು ಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಆದೇಶವನ್ನು ರದ್ದುಗೊಳಿಸಿ, ಠಾಕ್ರೆ ಗುಂಪಿನ ಎಲ್ಲಾ 14 ಶಾಸಕರನ್ನು ಅನರ್ಹಗೊಳಿಸುವಂತೆ ಗೋಗಾವಾಲೆ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT