ರಾಹುಲ್ ನಾರ್ವೇಕರ್ - ಏಕನಾಥ್ ಶಿಂಧೆ 
ದೇಶ

ಶಾಸಕರ ಅನರ್ಹತೆ ಪ್ರಕರಣ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಬಾಂಬೆ ಹೈಕೋರ್ಟ್ ನೋಟಿಸ್

ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿದೆ.

ವಿಭಾಗೀಯ ಪೀಠ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ.

ಠಾಕ್ರೆ ಬಣದ 14 ಶಾಸಕರ ಅನರ್ಹತೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 10 ರಂದು ಸ್ಪೀಕರ್ ನಾರ್ವೇಕರ್ ಅವರು ವಜಾಗೊಳಿಸಿದ್ದು, ಈ ಆದೇಶವನ್ನು ಪ್ರಶ್ನಿಸಿ ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಸ್ಪೀಕರ್ ಆದೇಶ ಕಾನೂನು ಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಆದೇಶವನ್ನು ರದ್ದುಗೊಳಿಸಿ, ಠಾಕ್ರೆ ಗುಂಪಿನ ಎಲ್ಲಾ 14 ಶಾಸಕರನ್ನು ಅನರ್ಹಗೊಳಿಸುವಂತೆ ಗೋಗಾವಾಲೆ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ