ಸಾಂದರ್ಭಿಕ ಚಿತ್ರ 
ದೇಶ

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ರಾಮಜನ್ಮಭೂಮಿ ಹೋರಾಟದಿಂದ ಸನ್ಯಾಸಿಯಾದೆ ಎಂದು ಹೇಳಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜನವರಿ 22 ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಬುಧವಾರ ತಳ್ಳಿ ಹಾಕಿದ್ದಾರೆ. 

ಲಖನೌ: ರಾಮಜನ್ಮಭೂಮಿ ಹೋರಾಟದಿಂದ ಸನ್ಯಾಸಿಯಾದೆ ಎಂದು ಹೇಳಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜನವರಿ 22 ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಬುಧವಾರ ತಳ್ಳಿ ಹಾಕಿದ್ದಾರೆ. 

ಮೊದಲಿನಿಂದಲೂ ರಾಮ ಮಂದಿರ ಹೋರಾಟದಲ್ಲಿ ಸಂಬಂಧ ಹೊಂದಿದ್ದೇನೆ. ವಾಸ್ತವವಾಗಿ, ರಾಮಜನ್ಮಭೂಮಿ ಹೋರಾಟದಿಂದ ನಾನು ಸನ್ಯಾಸಿಯಾದೆ. ಆದರೆ, ರಾಮನ ಪ್ರಾಣ ಪ್ರತಿಷ್ಠಾ ಸಮಾರಂಭದಿಂದ ಯಾವುದೇ ಕ್ರೆಡಿಟ್ ತೆಗೆದುಕೊಳ್ಳಲು ನಾನು ಉದ್ದೇಶಿಸಿಲ್ಲ. ನಾವು ರಾಮನ ಸೇವಕರಾಗಿ ಅಯೋಧ್ಯೆಗೆ ಹೋಗುತ್ತಿದ್ದೇವೆ ಎಂದು ಟಿವಿ ಚಾನೆಲ್ ವೊಂದರಲ್ಲಿ ಹೇಳಿದರು. 

ರಾಮ ಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಾಯಕರಿಗೆ ನೀಡಲಾಯಿತು ಆದರೆ ಅವರು ಅದರ ಭಾಗವಾಗಲು ನಿರಾಕರಿಸಿದ್ದಾರೆ.“ರಾಮ ಮಂದಿರಕ್ಕೆ ಬರುವುದನ್ನು ಯಾರನ್ನೂ ತಡೆದಿಲ್ಲ. ರಾಮನ ಸೇವಕರಾಗಿ ಬರುವವರನ್ನು ಸ್ವಾಗತಿಸಲಾಗುತ್ತದೆ ಎಂದು ಅವರು ಟೀಕಿಸಿದರು.

ಇದು ಕ್ರೆಡಿಟ್ ತೆಗೆದುಕೊಳ್ಳುವ ಸಮಯವಲ್ಲ ಎಂದು ಹೇಳಿದ ಯೋಗಿ ಆದಿತ್ಯನಾಥ್, ರಾಮಮಂದಿರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಮ್ಮ ಗುರುದೇವ್ ಮಹಂತ್ ಅವೈದ್ಯನಾಥಜಿ ಅವರ ಪಾತ್ರವನ್ನು ವಿವರಿಸಿದರು.

ಈ ಹೋರಾಟದಲ್ಲಿ “3 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು ಮತ್ತು ದೇವಾಲಯದ ಪುನಶ್ಚೇತನಕ್ಕಾಗಿ 76 ಕ್ಕೂ ಹೆಚ್ಚು ಸಂಘರ್ಷಗಳು ನಡೆದವು. ಗೋರಕ್ಷನಾಥ ಪೀಠಕ್ಕೆ ಜನರು ಆಗಾಗ ಬರುತ್ತಿದ್ದರು. ಆ ಹೋರಾಟದ ಫಲವಾಗಿ ಇಂದು ದೇವಾಲಯ ತಲೆ ಎತ್ತಿದೆ' ಎಂದು ಸಿಎಂ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT