ಅಯೋಧ್ಯೆ ರಾಮಮಂದಿರ 
ದೇಶ

ರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ನೂತನ ವಿಗ್ರಹದ 'ಪ್ರಾಣ ಪ್ರತಿಷ್ಠಾಪನೆ' ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

"ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ದೇಶದಾದ್ಯಂತ 22ನೇ ಜನವರಿ 2024 ರಂದು ಆಚರಿಸಲಾಗುತ್ತಿದೆ. ನೌಕರರು ಸಹ ಈ ಸಂಭ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳ ನೌಕರರಿಗೆ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. 2024 ರ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ರಜೆ ನೀಡಲಾಗಿದೆ" ಎಂದು ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!

ಪೊಲೀಸರು ಡೀಲ್- ಅಪರಾಧಗಳಲ್ಲಿ ಭಾಗಿಯಾಗಬೇಡಿ, ಲಂಚ ಕೊಟ್ಟು ಇಲಾಖೆ ಸೇರಬೇಡಿ: ದೇವಾಲಯಗಳ ಹುಂಡಿ ರಕ್ಷಣೆಗೆ ತೀರ್ಮಾನ; ಸಿಎಂ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video