ಉದಯನಿಧಿ ಸ್ಟಾಲಿನ್ 
ದೇಶ

ಡಿಎಂಕೆ ರಾಮಮಂದಿರದ ವಿರೋಧಿಯಲ್ಲ; ಮಸೀದಿ ಕೆಡವಿ, ಮಂದಿರ ನಿರ್ಮಾಣ ಒಪ್ಪಲಾಗದು: ಉದಯನಿಧಿ ಸ್ಟಾಲಿನ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ, ಆದರೆ ಮಸೀದಿ ಕೆಡವಿ ಮಂದಿರ ಕಟ್ಟುವುದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.

ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕರುಣಾನಿಧಿ ಅವರು ಯಾವಾಗಲೂ ಹೇಳುತ್ತಿದ್ದರು, ಮಂದಿರ ಕಟ್ಟುವುದು ಸಮಸ್ಯೆಯಲ್ಲ, ಆದರೆ ಮಸೀದಿ ಕೆಡವಿ ಅಲ್ಲಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ, ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಉದಯನಿಧಿ ತಿಳಿಸಿದ್ದಾರೆ.

1992 ರಲ್ಲಿ ಬಾಬರಿ ಮಸೀದಿ ಧ್ವಂಸವನ್ನು ಉಲ್ಲೇಖಿಸಿದ ಉದಯನಿಧಿ ಸ್ಟಾಲಿನ್ ಅಲ್ಲಿ ದೇವಸ್ಥಾನ ಬರುವುದರಿಂದ ನಮಗೆ ಸಮಸ್ಯೆ ಇಲ್ಲ. ಮಸೀದಿ ಕೆಡವಿದ ನಂತರ ಮಂದಿರ ನಿರ್ಮಾಣಕ್ಕೆ ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿರುವ ಭವ್ಯ ಮಂದಿರದ ಶಂಕುಸ್ಥಾಪನೆ ಜನವರಿ 22 ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT