ಉದಯನಿಧಿ ಸ್ಟಾಲಿನ್ 
ದೇಶ

ಡಿಎಂಕೆ ರಾಮಮಂದಿರದ ವಿರೋಧಿಯಲ್ಲ; ಮಸೀದಿ ಕೆಡವಿ, ಮಂದಿರ ನಿರ್ಮಾಣ ಒಪ್ಪಲಾಗದು: ಉದಯನಿಧಿ ಸ್ಟಾಲಿನ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ ಆದರೆ ಮಸೀದಿ ಕೆಡವಿ ನಂತರ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ, ಆದರೆ ಮಸೀದಿ ಕೆಡವಿ ಮಂದಿರ ಕಟ್ಟುವುದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.

ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕರುಣಾನಿಧಿ ಅವರು ಯಾವಾಗಲೂ ಹೇಳುತ್ತಿದ್ದರು, ಮಂದಿರ ಕಟ್ಟುವುದು ಸಮಸ್ಯೆಯಲ್ಲ, ಆದರೆ ಮಸೀದಿ ಕೆಡವಿ ಅಲ್ಲಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ, ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಉದಯನಿಧಿ ತಿಳಿಸಿದ್ದಾರೆ.

1992 ರಲ್ಲಿ ಬಾಬರಿ ಮಸೀದಿ ಧ್ವಂಸವನ್ನು ಉಲ್ಲೇಖಿಸಿದ ಉದಯನಿಧಿ ಸ್ಟಾಲಿನ್ ಅಲ್ಲಿ ದೇವಸ್ಥಾನ ಬರುವುದರಿಂದ ನಮಗೆ ಸಮಸ್ಯೆ ಇಲ್ಲ. ಮಸೀದಿ ಕೆಡವಿದ ನಂತರ ಮಂದಿರ ನಿರ್ಮಾಣಕ್ಕೆ ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿರುವ ಭವ್ಯ ಮಂದಿರದ ಶಂಕುಸ್ಥಾಪನೆ ಜನವರಿ 22 ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಈ ಮತಾಂಧರರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!

ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಕುವೈತ್ ಆಕಸ್ಮಿಕವಾಗಿ ಹೊಡೆದುರುಳಿಸಿದೆ: ಅಮೆರಿಕ ಸೇನೆ

News wrap 02-03-2026| ಮಧ್ಯಪ್ರಾಚ್ಯದಲ್ಲಿ ಯುದ್ಧ: ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಸಹಾಯವಾಣಿ ಆರಂಭ; ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಲಿ'-MBP

SCROLL FOR NEXT