ದಿಗ್ವಿಜಯ್ ಸಿಂಗ್ 
ದೇಶ

ರಾಮಲಲ್ಲಾ ವಿಗ್ರಹ ಬಾಲರಾಮನಂತೆ ಕಾಣಿಸುತ್ತಿಲ್ಲ: ದಿಗ್ವಿಜಯ್ ಸಿಂಗ್ ಕೊಂಕು

ಅಯೋಧ್ಯೆ ರಾಮಮಂದಿರದಲ್ಲಿ  ಪ್ರತಿಷ್ಠಾಪನೆ ಮಾಡಲಿರುವ ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌  ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಭೋಪಾಲ್:‌ ಅಯೋಧ್ಯೆ ರಾಮಮಂದಿರದಲ್ಲಿ  ಪ್ರತಿಷ್ಠಾಪನೆ ಮಾಡಲಿರುವ ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌  ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಈ ಸಂಬಂಧ ಟ್ವಿಟ್ಟರ್  ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ, ವಿವಾದಿತ ಹಾಗೂ ನಾಶಪಡಿಸಿದ ವಿಗ್ರಹ ಎಲ್ಲಿದೆ? ಎರಡನೇ ಪ್ರತಿಮೆಯ ಅಗತ್ಯವೇನು? ನಮ್ಮ ಗುರು ಶಂಕರಾಚಾರ್ಯ ಸ್ವಾಮಿ, ಸ್ವರೂಪಾನಂದ ಜಿ ಮಹಾರಾಜ್ ಕೂಡ ರಾಮನ ವಿಗ್ರಹವನ್ನು ಸ್ಥಾಪಿಸಲು ಸಲಹೆ ನೀಡಿದ್ದರು. ರಾಮಜನ್ಮಭೂಮಿ ದೇವಸ್ಥಾನ ಮಗುವಿನ ರೂಪದಲ್ಲಿರಬೇಕು. ತಾಯಿ ಕೌಶಲ್ಯೆಯ ಮಡಿಲಲ್ಲಿರಬೇಕು. ಆದರೆ ದೇವಾಲಯದಲ್ಲಿ ಕುಳಿತಿರುವ ವಿಗ್ರಹವು ಮಗುವಿನಂತೆ ಕಾಣುತ್ತಿಲ್ಲ ಎಂದು ಬರೆದಿದ್ದಾರೆ.

ಈ ರೀತಿ ಬರೆದುಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿಗರು ಹಾಗೂ ರಾಮನ ಭಕ್ತರು ಸಿಡಿದೆದ್ದಿದ್ದಾರೆ.

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಮೊದಲು ಅಂದರೆ ಗುರುವಾರ ಅಯೋಧ್ಯೆಯ ದೇವಾಲಯದ ಗರ್ಭಗುಡಿಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಇರಿಸಲಾಯಿತು. ತಡರಾತ್ರಿ ಗರ್ಭಗುಡಿಯಲ್ಲಿ ನಡೆದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮುಸುಕಿನಿಂದ ಮುಚ್ಚಲ್ಪಟ್ಟ ವಿಗ್ರಹದ ಮೊದಲ ಫೋಟೋವನ್ನು ಬಹಿರಂಗಪಡಿಸಲಾಯಿತು.

ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಟ್ರಸ್ಟ್‌ ಸದಸ್ಯ ಕಮಲೇಶ್ವರ್ ಚೌಪಾಲ್, ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗಳಿಗೆ ಯಾವುದೇ ಕಾರಣಕ್ಕೂ ಪ್ರಾಮುಖ್ಯತೆ ನೀಡಬೇಡಿ. ಅವರ ಹೇಳಿಕೆಗಳು ಯಾವಾಗಲೂ ಅಸಂಬದ್ದ ಆಗಿರುತ್ತದೆ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವ ರೀತಿ ಅವರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ, ಗುರುವಾರ ಅಯೋಧ್ಯೆಯ ದೇವಾಲಯದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನು ಇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!