ಮಮತಾ ಬ್ಯಾನರ್ಜಿ 
ದೇಶ

'ಸರಿಯಾದ ಪ್ರಾಮುಖ್ಯತೆ' ನೀಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಎಂಸಿ ಸಿದ್ಧ: ಮಮತಾ

ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೇ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, “ಸರಿಯಾದ ಪ್ರಾಮುಖ್ಯತೆ” ನೀಡದಿದ್ದರೆ ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ವತಂತ್ರವಾಗಿ...

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೇ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, “ಸರಿಯಾದ ಪ್ರಾಮುಖ್ಯತೆ” ನೀಡದಿದ್ದರೆ ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಮುರ್ಷಿದಾಬಾದ್ ಜಿಲ್ಲಾ ಘಟಕದ ಸಾಂಸ್ಥಿಕ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಇದು ಅಲ್ಪಸಂಖ್ಯಾತ ಜನಸಂಖ್ಯೆಯನ್ನು ಹೆಚ್ಚು ಹೊಂದಿರುವ ಪ್ರದೇಶವಾಗಿದೆ ಮತ್ತು ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದೆ.

ಸಭೆಯಲ್ಲಿ, ಜಿಲ್ಲೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ ಜಯಭೇರಿ ಬಾರಿಸುವ ಅಗತ್ಯವನ್ನು ಒತ್ತಿ ಹೇಳಿದ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಕರೆ ನೀಡಿದರು.

"ನಮ್ಮ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, ಟಿಎಂಸಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಮ್ಮನ್ನು ಹೊರಗಿಟ್ಟು ಆರ್‌ಎಸ್‌ಪಿ, ಸಿಪಿಐ, ಸಿಪಿಐ(ಎಂ)ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ನಾವು ನಮ್ಮ ದಾರಿ ನೋಡಿಕೊಳ್ಳುತ್ತೇವೆ ಮತ್ತು ಎಲ್ಲಾ 42 ಸ್ಥಾನಗಳಲ್ಲಿ ಹೋರಾಡಲು ಮತ್ತು ಗೆಲ್ಲಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತೇವೆ” ಎಂದು ಹೇಳಿರುವುದಾಗಿ ಹೆಸರು ಹೇಳಲು ಇಚ್ಚಿಸಿದ ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT