ಅಯೋಧ್ಯೆ ರಾಮಮಂದಿರ 
ದೇಶ

ಅಯೋಧ್ಯೆಯ ರಾಮ ಮಂದಿರಕ್ಕೆ ಪಿಒಕೆಯಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ...

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ.
  
2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದ್ದರಿಂದ ಈ ಪವಿತ್ರ ನೀರನ್ನು ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಸೇವ್ ಶಾರದಾ ಸಮಿತಿ ಕಾಶ್ಮೀರ(SSCK) ಸಂಸ್ಥಾಪಕ ರವೀಂದರ್ ಪಂಡಿತ ಹೇಳಿದ್ದಾರೆ.

"ಶಾರದಾ ಪೀಠದ ಪಿಒಕೆಯಲ್ಲಿರುವ ಶಾರದಾ ಕುಂಡದ ಪವಿತ್ರ ನೀರನ್ನು ತನ್ವೀರ್ ಅಹ್ಮದ್ ಮತ್ತು ಅವರ ತಂಡ ಸಂಗ್ರಹಿಸಿದ್ದು, ಅದನ್ನು ಎಲ್ಒಸಿ(ಗಡಿ ನಿಯಂತ್ರಣ ರೇಖೆ)ಯಿಂದ ಆಚೆ ನಮ್ಮ ನಾಗರಿಕ ಸಮಾಜದ ಸದಸ್ಯರು ಇಸ್ಲಾಮಾಬಾದ್‌ಗೆ ಕೊಂಡೊಯ್ದರು. ಅಲ್ಲಿಂದ ಬ್ರಿಟನ್ ನಲ್ಲಿರುವ ಅವರ ಮಗಳು ಮಗ್ರಿಬಿಗೆ ಕಳುಹಿಸಲಾಯಿತು. ಮಗ್ರಿಬಿ 2023ರ ಆಗಸ್ಟ್‌ನಲ್ಲಿ ಬ್ರಿಟನ್ ನಿಂದ ಅಹಮದ್‌ಬಾದ್‌ಗೆ ಆಗಮಿಸಿದ ಕಾಶ್ಮೀರಿ ಪಂಡಿತ್ ಕಾರ್ಯಕರ್ತೆ ಸೋನಾಲ್ ಶೇರ್‌ಗೆ ಅದನ್ನು ಹಸ್ತಾಂತರಿಸಿದ್ದರು. ಅವರು ದೆಹಲಿಯಲ್ಲಿ ನನಗೆ ನೀರನ್ನು ತಲುಪಿಸಿದರು" ಎಂದು ರವೀಂದರ್ ಪಂಡಿತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT