ಅಯೋಧ್ಯೆ ರಾಮಮಂದಿರ 
ದೇಶ

ಅಯೋಧ್ಯೆಯ ರಾಮ ಮಂದಿರಕ್ಕೆ ಪಿಒಕೆಯಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ...

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ.
  
2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದ್ದರಿಂದ ಈ ಪವಿತ್ರ ನೀರನ್ನು ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಸೇವ್ ಶಾರದಾ ಸಮಿತಿ ಕಾಶ್ಮೀರ(SSCK) ಸಂಸ್ಥಾಪಕ ರವೀಂದರ್ ಪಂಡಿತ ಹೇಳಿದ್ದಾರೆ.

"ಶಾರದಾ ಪೀಠದ ಪಿಒಕೆಯಲ್ಲಿರುವ ಶಾರದಾ ಕುಂಡದ ಪವಿತ್ರ ನೀರನ್ನು ತನ್ವೀರ್ ಅಹ್ಮದ್ ಮತ್ತು ಅವರ ತಂಡ ಸಂಗ್ರಹಿಸಿದ್ದು, ಅದನ್ನು ಎಲ್ಒಸಿ(ಗಡಿ ನಿಯಂತ್ರಣ ರೇಖೆ)ಯಿಂದ ಆಚೆ ನಮ್ಮ ನಾಗರಿಕ ಸಮಾಜದ ಸದಸ್ಯರು ಇಸ್ಲಾಮಾಬಾದ್‌ಗೆ ಕೊಂಡೊಯ್ದರು. ಅಲ್ಲಿಂದ ಬ್ರಿಟನ್ ನಲ್ಲಿರುವ ಅವರ ಮಗಳು ಮಗ್ರಿಬಿಗೆ ಕಳುಹಿಸಲಾಯಿತು. ಮಗ್ರಿಬಿ 2023ರ ಆಗಸ್ಟ್‌ನಲ್ಲಿ ಬ್ರಿಟನ್ ನಿಂದ ಅಹಮದ್‌ಬಾದ್‌ಗೆ ಆಗಮಿಸಿದ ಕಾಶ್ಮೀರಿ ಪಂಡಿತ್ ಕಾರ್ಯಕರ್ತೆ ಸೋನಾಲ್ ಶೇರ್‌ಗೆ ಅದನ್ನು ಹಸ್ತಾಂತರಿಸಿದ್ದರು. ಅವರು ದೆಹಲಿಯಲ್ಲಿ ನನಗೆ ನೀರನ್ನು ತಲುಪಿಸಿದರು" ಎಂದು ರವೀಂದರ್ ಪಂಡಿತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT