ದೇಶ

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ

Lingaraj Badiger

ಮುಂಬೈ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಬಂದಿದೆ ಎಂದು ಮೂಲಗಳು ತಿಳಿಸಿವೆ. ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಿರುವುದಕ್ಕೆ ಶಿವಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಆಹ್ವಾನ ನೀಡಿದ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಯುಬಿಟಿ ಸಂಸದ ಸಂಜಯ್ ರಾವತ್ ಅವರು, "ರಾಮ ಜನ್ಮಭೂಮಿ ಆಂದೋಲನದಲ್ಲಿ ಠಾಕ್ರೆ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಇದನ್ನು ರಾಮ ಕ್ಷಮಿಸುವುದಿಲ್ಲ" ಎಂದು ಟೀಕಿಸಿದ್ದಾರೆ.

SCROLL FOR NEXT