ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಜನವರಿ 22 ರಂದು ಮಾಂಸದ ಅಂಗಡಿಗಳನ್ನು ಬಂದ್ ಮಾಡವಂತೆ ಮನವಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ದೆಹಲಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸುವಂತೆ ದೆಹಲಿ ಮಾಂಸ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಖುರೇಷಿ ಮನವಿ...

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ದೆಹಲಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸುವಂತೆ ದೆಹಲಿ ಮಾಂಸ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಖುರೇಷಿ ಮನವಿ ಮಾಡಿದ್ದಾರೆ.

ಎರಡು ಸಮುದಾಯಗಳ ನಡುವೆ ಏಕತೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವುದು ಮತ್ತು ಜನರನ್ನು ಒಟ್ಟಿಗೆ ಸೇರಿಸುವುದು ಈ ಮನವಿಯ ಹಿಂದಿನ ಉದ್ದೇಶವಾಗಿದೆ ಎಂದು ಖುರೇಷಿ ಪಿಟಿಐಗೆ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ "ಪ್ರಾಣ ಪ್ರತಿಷ್ಠಾಪನೆ" ಸಮಾರಂಭಕ್ಕಾಗಿ ಜನರ ಭಾವನೆಗಳನ್ನು ಗೌರವಿಸುವ ಸಲುವಾಗಿ ದೆಹಲಿಯ ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸ, ಮೀನು ಮಾರಾಟದ ಅಂಗಡಿಗಳನ್ನು ಬಂದ್ ಮಾಡುವಂತೆ ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

"ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ನಮ್ಮ ಹಿಂದೂ ಸಹೋದರ, ಸಹೋದರಿಯರ ಆಚರಣೆಯನ್ನು ಗೌರವಿಸಲು ಜನವರಿ 22 ರಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸ ಹಾಗೂ ಮೀನು ಮಾರಾಟಗಾರರಿಗೆ ತಮ್ಮ ಅಂಗಡಿಗಳನ್ನು ಬಂದ್ ಮಾಡುವಂತೆ ನಾವು ಮನವಿ ಮಾಡಿದ್ದೇವೆ" ಎಂದು ಖುರೇಷಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ

"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ

IPL 2026: ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು

Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ'ನ 4 ಸಿಮ್ ಕಾರ್ಡ್ ವಶಕ್ಕೆ; ಸ್ಫೋಟಕ ಮಾಹಿತಿ ಬಹಿರಂಗ!

'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!

SCROLL FOR NEXT