ಅಮಿತ್ ಶಾ 
ದೇಶ

ಭಾರತ-ಮ್ಯಾನ್ಮಾರ್ ಗಡಿಯಲ್ಲೂ ಸೂಕ್ತ ಭದ್ರತೆ, ಮುಕ್ತ ಸಂಚಾರಕ್ಕೆ ಬ್ರೇಕ್: ಅಮಿತ್ ಶಾ

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಜನರ ಮುಕ್ತ ಸಂಚಾರವನ್ನು ಸರ್ಕಾರ ತಡೆಯಲಿದೆ ಮತ್ತು ಬಾಂಗ್ಲಾದೇಶದಂತೆ ಮ್ಯಾನ್ಮಾರ್ ಗಡಿಯಲ್ಲೂ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಗುವಾಹಟಿ: ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಜನರ ಮುಕ್ತ ಸಂಚಾರವನ್ನು ಸರ್ಕಾರ ತಡೆಯಲಿದೆ ಮತ್ತು ಬಾಂಗ್ಲಾದೇಶದಂತೆ ಮ್ಯಾನ್ಮಾರ್ ಗಡಿಯಲ್ಲೂ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಇಂದು ಅಸ್ಸಾಂ ಪೊಲೀಸ್ ಪಡೆಗೆ ಹೊಸದಾಗಿ ರಚಿಸಲಾದ ಐದು ಕಮಾಂಡೋ ಬೆಟಾಲಿಯನ್‌ಗಳ ಮೊದಲ ಬ್ಯಾಚ್‌ನ ಪಾಸಿಂಗ್ ಔಟ್ ಪರೇಡ್ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮ್ಯಾನ್ಮಾರ್‌ನೊಂದಿಗೆ ಮುಕ್ತ-ಸಂಚಾರ ಸೌಲಭ್ಯವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸುತ್ತಿದೆ ಎಂದು ತಿಳಿಸಿದರು.

ಭಾರತ-ಮ್ಯಾನ್ಮಾರ್ ಗಡಿಯಲ್ಲೂ ಬಾಂಗ್ಲಾದೇಶದ ಗಡಿಯಂತೆ ಸೂಕ್ತ ಭದ್ರತೆ ಒದಗಿಸಲಾಗುವುದು... ಭಾರತ ಸರ್ಕಾರವು ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರವನ್ನು ನಿಲ್ಲಿಸಲಿದೆ ಎಂದು ಅವರು ಹೇಳಿದರು.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭಾರಿ ಬದಲಾವಣೆಯಾಗಿದೆ ಎಂದು ಅಮಿತ್ ಶಾ ತಿಳಿಸಿದರು.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಸರ್ಕಾರಿ ನೌಕರಿ ಪಡೆಯಲು ಜನರು ಲಂಚ ನೀಡಬೇಕಾಗಿತ್ತು ಎಂದು ಆರೋಪಿಸಿದ ಅವರು, ಬಿಜೆಪಿ ಆಡಳಿತದಲ್ಲಿ ಉದ್ಯೋಗಕ್ಕಾಗಿ ಒಂದು ಪೈಸೆಯೂ ನೀಡಬೇಕಾಗಿಲ್ಲ ಎಂದರು.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭದ ಬಗ್ಗೆ ಮಾತನಾಡಿದ ಅಮಿತ್ ಶಾ, 550 ವರ್ಷಗಳ ನಂತರ ಭಗವಾನ್ ರಾಮ ತವರಿಗೆ ಮರಳುತ್ತಿದ್ದಾನೆಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಮನೆ ಬಳಿ ರಾಹುಲ್​ ಗಾಂಧಿ ಪ್ರತಿಭಟನೆ ಪ್ರಶ್ನಿಸಿದ ವಾಂಗ್‌ಚುಕ್ ಪತ್ನಿ; ಅದರಲ್ಲಿ ಪ್ರಾಮಾಣಿಕತೆ ಇರಲಿಲ್ಲ ಎಂದು ಕಿಡಿ!

ಸಿಂಧೂ ನದಿ ನೀರು ಒಪ್ಪಂದ ಮುಂದುವರಿಯಲು ಸಾಧ್ಯವೇ ಇಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಬಿಗ್ ಶಾಕ್ ನೀಡಿದ ಭಾರತ!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP