ಏಮ್ಸ್. 
ದೇಶ

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ: ಅರ್ಧ ದಿನ ರಜೆ ನಿರ್ಧಾರ ವಾಪಸ್ ಪಡೆದ ಏಮ್ಸ್

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನವಾದ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಅರ್ಧ ದಿನ (ಮಧ್ಯಾಹ್ನ 2:30) ರ ವರೆಗೆ ರಜೆ ಘೋಷಿಸಿದ್ದ ನಿರ್ಧಾರವನ್ನು ಏಮ್ಸ್ ಹಿಂಪಡೆದಿದೆ. 

ನವದೆಹಲಿ: ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನವಾದ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಅರ್ಧ ದಿನ (ಮಧ್ಯಾಹ್ನ 2:30) ರ ವರೆಗೆ ರಜೆ ಘೋಷಿಸಿದ್ದ ನಿರ್ಧಾರವನ್ನು ಏಮ್ಸ್ ಹಿಂಪಡೆದಿದೆ. 

ದೆಹಲಿಯ ಏಮ್ಸ್ ಆಡಳಿತ ಕಚೇರಿಯ ಅಧಿಕಾರಿ ರಾಜೇಶ್ ಕುಮಾರ್ ಪ್ರಕಟಿಸಿದ ಪತ್ರದಲ್ಲಿ ಕೇಂದ್ರ ಸರ್ಕಾರ ಜ.22 ರಂದು ತನ್ನ ನೌಕರರಿಗೆ ಅರ್ಧ ದಿನದ ರಜೆ ಘೋಷಿಸಿದೆ. 22.01.2024 ರಂದು 14.30 ಗಂಟೆಗಳವರೆಗೆ ಸಂಸ್ಥೆಯು ಅರ್ಧ ದಿನ ಮುಚ್ಚಿರುತ್ತದೆ ಎಂದು ಎಲ್ಲಾ ಉದ್ಯೋಗಿಗಳ ಮಾಹಿತಿಗಾಗಿ ತಿಳಿಸಲಾಗಿದೆ, ಆದರೆ ಎಲ್ಲಾ ತುರ್ತು ವೈದ್ಯಕೀಯ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ಏಮ್ಸ್ ಸ್ಪಷ್ಟಪಡಿಸಿತ್ತು. 

ಈ ಅಧಿಸೂಚನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ರೋಗಿಗಳು ವಾರಗಟ್ಟಲೆ, ಮತ್ತು ಕೆಲವೊಮ್ಮೆ, ಪ್ರೀಮಿಯರ್ ಹೆಲ್ತ್‌ಕೇರ್ ಸೌಲಭ್ಯದಲ್ಲಿ ಅಪಾಯಿಂಟ್‌ಮೆಂಟ್ ಪಡೆಯಲು ತಿಂಗಳುಗಟ್ಟಲೆ ಕಾಯುತ್ತಾರೆ. ಏಕಾಏಕಿ ಒಪಿಡಿ ಸೇವೆಗಳನ್ನು ಬಂದ್ ಮಾಡಿದರೆ, ಅಂತಹವರಿಗೆ ಕಷ್ಟವಾಗಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇಂದು ಬೆಳಿಗ್ಗೆ, AIIMS-ದೆಹಲಿ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, OPD  ಬರುವ ರೋಗಿಗಳಿಗೆ ಯಾವುದೇ ಅನಾನುಕೂಲತೆಯಾಗದಂತೆ ಎಚ್ಚರ ವಹಿಸಲು ಮತ್ತು ರೋಗಿಗಳ ಆರೈಕೆಗೆ ಅನುಕೂಲವಾಗುವಂತೆ ಅಪಾಯಿಂಟ್‌ಮೆಂಟ್ ಹೊಂದಿರುವ ರೋಗಿಗಳಿಗೆ ಸೇವೆಗಳು ಲಭ್ಯವಿರಲಿದೆ" ಎಂದು ಹೇಳಿದೆ.

ರಾಷ್ಟ್ರ ರಾಜಧಾನಿಯ ಮತ್ತೊಂದು ಪ್ರಮುಖ ಆರೋಗ್ಯ ಸೌಲಭ್ಯವಾದ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ OPD ನೋಂದಣಿ ಬೆಳಿಗ್ಗೆ 8 ರಿಂದ 10 ರವರೆಗೆ ನಡೆಯುತ್ತದೆ ಮತ್ತು ಎಲ್ಲಾ ನೋಂದಾಯಿತ ರೋಗಿಗಳಿಗೆ ಸೇವೆ ಲಭ್ಯವಿದೆ ಎಂದು ಹೇಳಿದೆ. ಆಸ್ಪತ್ರೆಯು ಔಷಧಾಲಯದ ಸೇವೆಗಳು ಮಧ್ಯಾಹ್ನದವರೆಗೆ ಇರಲಿದೆ. ಆದರೆ ಆಯ್ಕೆ ಮಾಡಿದ ಶಸ್ತ್ರಚಿಕಿತ್ಸೆಗಳು ನಡೆಯುವುದಿಲ್ಲ.

ಇದಕ್ಕೂ ಮೊದಲು, ಅಯೋಧ್ಯೆ ಕಾರ್ಯಕ್ರಮಕ್ಕೆ ಅರ್ಧ ದಿನದ ವಿರಾಮದ AIIMS ಘೋಷಣೆಯನ್ನು ಪ್ರತಿಪಕ್ಷ ನಾಯಕರು ಬಲವಾಗಿ ಟೀಕಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT