ಹರ್ಭಜನ್ ಸಿಂಗ್ 
ದೇಶ

''ಇತರರು ಏನೇ ಮಾಡಿದರೂ ಡೋಂಟ್ ಕೇರ್, ರಾಮ ಮಂದಿರ ಉದ್ಘಾಟನೆಗೆ ಹೋಗೆ ಹೋಗುತ್ತೇನೆ- ಹರ್ಭಜನ್ ಸಿಂಗ್

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ (ರಾಮನ ವಿಗ್ರಹ) 'ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಗೈರಾಗಲು ಬಹುತೇಕ ವಿಪಕ್ಷಗಳು ನಿಲುವು ತಾಳಿದರೂ ತಾವು ಪಾಲ್ಗೊಳ್ಳುವುದಾಗಿ ಮಾಜಿ ಕ್ರಿಕೆಟಿಗ ಮತ್ತು ಎಎಪಿ ಸಂಸದ ಹರ್ಭಜನ್ ಸಿಂಗ್ ಶನಿವಾರ ಹೇಳಿದ್ದಾರೆ. 

ಪಂಜಾಬ್: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಗೈರಾಗಲು ಬಹುತೇಕ ವಿಪಕ್ಷಗಳು ನಿಲುವು ತಾಳಿದರೂ ತಾವು ಪಾಲ್ಗೊಳ್ಳುವುದಾಗಿ ಮಾಜಿ ಕ್ರಿಕೆಟಿಗ ಮತ್ತು ಎಎಪಿ ಸಂಸದ ಹರ್ಭಜನ್ ಸಿಂಗ್ ಶನಿವಾರ ಹೇಳಿದ್ದಾರೆ. 

"ಯಾರು ಹೋಗ್ತಾರೆ ಅಥವಾ ಹೋಗಲ್ಲ ಅನ್ನೋದು ವಿಷಯವಲ್ಲಾ. ಕಾಂಗ್ರೆಸ್ ಅಥವಾ ಇತರ ಪಕ್ಷಗಳು ಹೋಗಲಿ, ಬಿಡಲಿ ನಾನು ಖಂಡಿತವಾಗಿಯೂ ಹೋಗುತ್ತೇನೆ.  ದೇವರನ್ನು ನಂಬುವನಾಗಿ ಇದು ನನ್ನ ವೈಯಕ್ತಿಕ ನಿಲುವು. ಇದರಿಂದ ಯಾರಿಗಾದರೂ ತೊಂದರೆಯಾದರೆ ಅವರು ಬಯಸಿದಂತೆ  ಏನೇ ಮಾಡಲಿ ಎಂದು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು. 

ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವ ಮಧ್ಯೆ ಹರ್ಭಜನ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸುತ್ತಿದೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಚಾರದ ಅಸ್ತ್ರವಾಗಿ ದೇವಾಲಯದ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

"ಈ ಸಮಯದಲ್ಲಿ ಈ ದೇವಾಲಯವನ್ನು ನಿರ್ಮಿಸುತ್ತಿರುವುದು ನಮ್ಮ ಅದೃಷ್ಟ, ಆದ್ದರಿಂದ ನಾವೆಲ್ಲರೂ ಹೋಗಿ ರಾಮನಿಂದ ಆಶೀರ್ವಾದವನ್ನು ಪಡೆಯಬೇಕು. ಆದ್ದರಿಂದ ಖಂಡಿತವಾಗಿಯೂ ಹೋಗುತ್ತಿದ್ದೇನೆ ಎಂದು ಹೇಳಿದರು. 

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗುವುದಾಗಿ ಹೇಳಿದ ಕೆಲವು ದಿನಗಳ ನಂತರ ಹರ್ಭಜನ್ ಸಿಂಗ್ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ. ಜನವರಿ 22ರ ನಂತರ ಪತ್ನಿ, ಮಕ್ಕಳು ಹಾಗೂ ಪೋಷಕರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಕೇಜ್ರಿವಾಲ್ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT