ರಾಮಮಂದಿರ 
ದೇಶ

ಅಯೋಧ್ಯೆ ರಾಮಮಂದಿರ ಉದ್ಘಾಟನೆ: 7 ಸಾವಿರ ಗಣ್ಯರು, 506 ಮಂದಿ A ಲಿಸ್ಟ್ ನಲ್ಲಿ!

ಹಿಂದೂ ಸಮುದಾಯದ ಶತಮಾನಗಳ ಬೇಡಿಕೆ ಅಯೋಧ್ಯೆಯ ಶ್ರೀರಾಮಚಂದ್ರ ದೇಗುಲ ಕೊನೆಗೂ ಉದ್ಧಾಟನೆಯಾಗುತ್ತಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರೊಬ್ಬರಿ 7 ಸಾವಿರ ಮಂದಿ ಗಣ್ಯರು ಆಗಮಿಸುತ್ತಿದ್ದಾರೆ.

ಅಯೋಧ್ಯೆ: ಹಿಂದೂ ಸಮುದಾಯದ ಶತಮಾನಗಳ ಬೇಡಿಕೆ ಅಯೋಧ್ಯೆಯ ಶ್ರೀರಾಮಚಂದ್ರ ದೇಗುಲ ಕೊನೆಗೂ ಉದ್ಧಾಟನೆಯಾಗುತ್ತಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರೊಬ್ಬರಿ 7 ಸಾವಿರ ಮಂದಿ ಗಣ್ಯರು ಆಗಮಿಸುತ್ತಿದ್ದಾರೆ.

ಹೌದು.. ಅಯೋಧ್ಯೆಯ ರಾಮಮಂದಿರ ಆವರಣದಲ್ಲಿ ನಡೆಯುತ್ತಿರುವ ಈ ಭವ್ಯ ಸಮಾರಂಭಕ್ಕೆ 7,000 ಕ್ಕೂ ಹೆಚ್ಚು ಗಣ್ಯರನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ಬಹುತೇಕ ಗಣ್ಯರು ಅಯೋಧ್ಯೆ ತಲುಪಿದ್ದಾರೆ. ಅಂತೆಯೇ ಈ ಆಯ್ದ ಪಟ್ಟಿಯಲ್ಲಿ 506 ಎ-ಲಿಸ್ಟರ್‌ ಗಣ್ಯರೂ ಕೂಡ ಇದ್ದು, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಮತ್ತು ಕ್ರೀಡಾ ಐಕಾನ್ ಸಚಿನ್ ತೆಂಡೂಲ್ಕರ್ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಪ್ರಮುಖ ವ್ಯಕ್ತಿಗಳಲ್ಲಿ ಸೇರಿದ್ದಾರೆ. ಹೀಗಾಗಿ ಇಡೀ ಕಾರ್ಯಕ್ರಮಕ್ಕೆ ಅಭೂತಪೂರ್ವ ಭದ್ರತೆ ಒದಗಿಸಲಾಗಿದೆ.

ಅಂತೆಯೇ "ಪ್ರಾಣ ಪ್ರತಿಷ್ಠಾ" ದಲ್ಲಿ ಪಾಲ್ಗೊಳ್ಳುವವರಲ್ಲಿ ರಾಮ ಜನ್ಮಭೂಮಿ ಆಂದೋಲನಕ್ಕೆ ಸಂಬಂಧಿಸಿದ ವ್ಯಕ್ತಿಗಳೂ ಸೇರಿದ್ದಾರೆ. ಸಮಾರಂಭಕ್ಕೆ ಆಹ್ವಾನಿಸಲಾದ ಬಹುತೇಕ ಎಲ್ಲಾ ವಿರೋಧ ಪಕ್ಷದ ನಾಯಕರು ಹಾಜರಾಗಲು ನಿರಾಕರಿಸಿದ್ದು, ಕಾಂಗ್ರೆಸ್ ಇದನ್ನು "ಬಿಜೆಪಿ-ಆರ್ಎಸ್ಎಸ್ ಕಾರ್ಯಕ್ರಮ" ಎಂದು ಕರೆದಿದೆ.

ರಾಮ ಜನ್ಮಭೂಮಿ-ಬಾಬರಿ ಮಸೀದಿ ಶೀರ್ಷಿಕೆ ಮೊಕದ್ದಮೆಯಲ್ಲಿ 2019 ರಲ್ಲಿ ಐತಿಹಾಸಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಾಧ್ಯವಾದ ದೇವಾಲಯದ ನಿರ್ಮಾಣದ ಮೊದಲ ಹಂತದ ನಂತರ ಶಂಕುಸ್ಥಾಪನೆ ಸಮಾರಂಭ ನಡೆಸಲಾಗಿತ್ತು. ರಾಮನ ಜನ್ಮಸ್ಥಳವನ್ನು ಗುರುತಿಸುವ ದೇವಾಲಯದ ಸ್ಥಳದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ದಾವೆದಾರರು ವಾದಿಸಿದ್ದರು. 1992 ರಲ್ಲಿ, 16 ನೇ ಶತಮಾನದ ಮಸೀದಿಯನ್ನು "ಕರ ಸೇವಕರು" ಕೆಡವಿ ಹಾಕಿದ್ದರು. ಇದೀಗ ಸುಪ್ರೀಂ ಕೋರ್ಟ್ ನ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಕೊನೆಗೂ ರಾಮಮಂದಿರ ತಲೆ ಎತ್ತಿ ನಿಂತಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT