ಲೋಹದ ಹಣತೆ ಉಡುಗೊರೆ 
ದೇಶ

ರಾಮ ಮಂದಿರ ಉದ್ಘಾಟನೆ: ಅತಿಥಿ, ಗಣ್ಯರಿಗೆ, ಅಯೋಧ್ಯೆ ಕುರಿತ ಪುಸ್ತಕ, ಲೋಹದ ಹಣತೆ ಉಡುಗೊರೆ

ಅಯೋಧ್ಯೆಯ ರಾಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು, ಅತಿಥಿಗಳಿಗೆ ಹಲವು ಉಡುಗೊರೆಗಳನ್ನು ನೀಡಲಾಗಿದೆ. 

ಅಯೋಧ್ಯೆ: ಅಯೋಧ್ಯೆಯ ರಾಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು, ಅತಿಥಿಗಳಿಗೆ ಹಲವು ಉಡುಗೊರೆಗಳನ್ನು ನೀಡಲಾಗಿದೆ. ಈ ಪೈಕಿ ಲೋಹದ ಹಣತೆ, ಅಯೋಧ್ಯೆಯ ಕುರಿತಾದ ಪುಸ್ತಕ, ವಿಶೇಷ ಮಾಲೆ, ಭಗವಾನ್ ರಾಮನ ಹೆಸರು ಇರುವ ಸ್ಕಾರ್ಫ್ ಗಳು ಪ್ರಮುಖವಾದದ್ದಾಗಿದೆ. 

ಮಂದಿರ ಹಾಗೂ ಭಗವಾನ್ ರಾಮಲಲ್ಲಾನ ಗ್ರಾಫಿಕ್ ಚಿತ್ರವಿರುವ ಬ್ಯಾಗ್ ನಲ್ಲಿ ಉಡುಗೊರೆಗಳನ್ನಿಟ್ಟು ಕೊಡಲಾಗಿದೆ. ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಇಂದು ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರಾಣಪ್ರತಿಷ್ಠಾಪನೆ ನೆರವೇರಿತು. 

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಂದ 7,000 ಮಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ನೀಡಿತ್ತು. ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂದಿರಕ್ಕೆ ಹೂವಿನ ಅಲಂಕಾರ ಮಾಡಲಾಗಿತ್ತು. 

ಉಡುಗೊರೆ ನೀಡಲಾದ ಅಯೋಧ್ಯ ಧಾಮ- ಭಗವಂತನ ಸನ್ನಿಧಿ ಎಂಬ ಶೀರ್ಶಿಕೆ ಇರುವ ಪುಸ್ತಕದಲ್ಲಿ ಭಗವಾನ್ ರಾಮಲಲ್ಲಾನ ಹಳೆಯ ವಿಗ್ರಹದ ಫೋಟೋವನ್ನು ಒಳಗೊಂಡಿದೆ. ತುಳಸಿ ಮಾಲೆಯಲ್ಲಿ ಉತ್ತರ ಪ್ರದೇಶ ಪ್ರವಾಸೋದ್ಯಮ ಎಂಬ ಟ್ಯಾಗ್ ಲೈನ್ ಇದೆ. ಅತಿಥಿಗಳಿಗೆ ಲಡ್ಡು, ಗೋಡಂಬಿ ಹಾಗೂ ಇನ್ನಿತರ ಪ್ರಸಾದ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!