ಲೋಹದ ಹಣತೆ ಉಡುಗೊರೆ 
ದೇಶ

ರಾಮ ಮಂದಿರ ಉದ್ಘಾಟನೆ: ಅತಿಥಿ, ಗಣ್ಯರಿಗೆ, ಅಯೋಧ್ಯೆ ಕುರಿತ ಪುಸ್ತಕ, ಲೋಹದ ಹಣತೆ ಉಡುಗೊರೆ

ಅಯೋಧ್ಯೆಯ ರಾಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು, ಅತಿಥಿಗಳಿಗೆ ಹಲವು ಉಡುಗೊರೆಗಳನ್ನು ನೀಡಲಾಗಿದೆ. 

ಅಯೋಧ್ಯೆ: ಅಯೋಧ್ಯೆಯ ರಾಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು, ಅತಿಥಿಗಳಿಗೆ ಹಲವು ಉಡುಗೊರೆಗಳನ್ನು ನೀಡಲಾಗಿದೆ. ಈ ಪೈಕಿ ಲೋಹದ ಹಣತೆ, ಅಯೋಧ್ಯೆಯ ಕುರಿತಾದ ಪುಸ್ತಕ, ವಿಶೇಷ ಮಾಲೆ, ಭಗವಾನ್ ರಾಮನ ಹೆಸರು ಇರುವ ಸ್ಕಾರ್ಫ್ ಗಳು ಪ್ರಮುಖವಾದದ್ದಾಗಿದೆ. 

ಮಂದಿರ ಹಾಗೂ ಭಗವಾನ್ ರಾಮಲಲ್ಲಾನ ಗ್ರಾಫಿಕ್ ಚಿತ್ರವಿರುವ ಬ್ಯಾಗ್ ನಲ್ಲಿ ಉಡುಗೊರೆಗಳನ್ನಿಟ್ಟು ಕೊಡಲಾಗಿದೆ. ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಇಂದು ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರಾಣಪ್ರತಿಷ್ಠಾಪನೆ ನೆರವೇರಿತು. 

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಂದ 7,000 ಮಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ನೀಡಿತ್ತು. ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂದಿರಕ್ಕೆ ಹೂವಿನ ಅಲಂಕಾರ ಮಾಡಲಾಗಿತ್ತು. 

ಉಡುಗೊರೆ ನೀಡಲಾದ ಅಯೋಧ್ಯ ಧಾಮ- ಭಗವಂತನ ಸನ್ನಿಧಿ ಎಂಬ ಶೀರ್ಶಿಕೆ ಇರುವ ಪುಸ್ತಕದಲ್ಲಿ ಭಗವಾನ್ ರಾಮಲಲ್ಲಾನ ಹಳೆಯ ವಿಗ್ರಹದ ಫೋಟೋವನ್ನು ಒಳಗೊಂಡಿದೆ. ತುಳಸಿ ಮಾಲೆಯಲ್ಲಿ ಉತ್ತರ ಪ್ರದೇಶ ಪ್ರವಾಸೋದ್ಯಮ ಎಂಬ ಟ್ಯಾಗ್ ಲೈನ್ ಇದೆ. ಅತಿಥಿಗಳಿಗೆ ಲಡ್ಡು, ಗೋಡಂಬಿ ಹಾಗೂ ಇನ್ನಿತರ ಪ್ರಸಾದ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT