ದೇವಸ್ಥಾನ ಬಳಿ ಸೇರಿದ ಅಪಾರ ಭಕ್ತರು 
ದೇಶ

ಅಪಾರ ಜನಸ್ತೋಮ, ಭಕ್ತರ ತಳ್ಳಾಟ, ನೂಕಾಟ: ಮಧ್ಯಾಹ್ನ 2.30ರವರೆಗೆ ರಾಮ ಮಂದಿರ ಬಾಗಿಲು ಮುಚ್ಚಿದ ಪೊಲೀಸರು

ರಾಮ ಮಂದಿರ ಉದ್ಘಾಟನೆಯಾದ ಮರುದಿನ ಇಂದು ಮಂಗಳವಾರ ಮುಂಜಾನೆ ದೇವಾಲಯದ ಬಾಗಿಲು ಸಾರ್ವಜನಿಕ ದರ್ಶನಕ್ಕೆ ತೆರೆಯುತ್ತಿದ್ದಂತೆ ವಿಪರೀತ ನೂಕುನುಗ್ಗಲು ಉಂಟಾಯಿತು.

ಅಯೋಧ್ಯೆ: ರಾಮ ಮಂದಿರ ಉದ್ಘಾಟನೆಯಾದ ಮರುದಿನ ಇಂದು ಮಂಗಳವಾರ ಮುಂಜಾನೆ ದೇವಾಲಯದ ಬಾಗಿಲು ಸಾರ್ವಜನಿಕ ದರ್ಶನಕ್ಕೆ ತೆರೆಯುತ್ತಿದ್ದಂತೆ ವಿಪರೀತ ನೂಕುನುಗ್ಗಲು ಉಂಟಾಯಿತು.

ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ  ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ.

"ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ" ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.

ನಿನ್ನೆ ರಾತ್ರಿ, ಮಹಾಮಸ್ತಕಾಭಿಷೇಕ ಸಮಾರಂಭಕ್ಕಾಗಿ ಅಲಂಕೃತವಾಗಿದ್ದ ವಿಧ್ಯುಕ್ತ ಗೇಟ್‌ವೇ ಬಳಿ ಹೆಚ್ಚಿನ ಜನರು ಜಮಾಯಿಸಿದ್ದಾರೆ. ಪೊಲೀಸರಿಗೆ ಜನರನ್ನು ನಿಯಂತ್ರಿಸಲು ಕಷ್ಟವಾಗುತ್ತಿದೆ. ಮುಂಜಾನೆ 3 ಗಂಟೆಯಿಂದಲೇ ಭಕ್ತರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ದೇವಾಲಯದ ಆವರಣದಲ್ಲಿ ನೂಕು ನುಗ್ಗಲು ಉಂಟಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

11 ಬೌಂಡರಿ, 15 ಸಿಕ್ಸರ್... 32 ಎಸೆತಗಳಲ್ಲಿ ಶತಕ: ರಿಷಬ್ ಪಂತ್ ದಾಖಲೆಗೇ ಕುತ್ತು ತಂದಿದ್ದ Vaibhav Suryavanshi!

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಬಿಹಾರ ರೀತಿ ಫಲಿತಾಂಶ ಮರುಕಳಿಸಲಿದೆ: ಎಚ್‌.ಡಿ ಕುಮಾರಸ್ವಾಮಿ ಭವಿಷ್ಯ

SCROLL FOR NEXT